ಬ್ರೇಕಿಂಗ್ ನ್ಯೂಸ್
01-10-25 02:39 pm Mangalore Correspondent ಕ್ರೈಂ
ಮಂಗಳೂರು, ಅ.1 : ಸಾಮಾಜಿಕ ಜಾಲತಾಣದಲ್ಲಿ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ಈ ಷೇರಿನಲ್ಲಿ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತದೆ ಎಂದು ಪ್ರಚಾರ ಮಾಡುವ ವಿಡಿಯೋ ನೋಡಿ ನಿಜವೆಂದು ನಂಬಿದ ಮಂಗಳೂರಿನ ಮಹಿಳೆಯೊಬ್ಬರು 9.10 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ನಗರದ ಉರ್ವ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.26ರಂದು ಮಹಿಳೆ ಫೇಸ್ಬುಕ್ ನೋಡುತ್ತಿದ್ದಾಗ ಸುಧಾಮೂರ್ತಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೂಡಿಕೆ ಬಗ್ಗೆ ಪ್ರಚಾರ ಮಾಡುವ ಎಐ ವಿಡಿಯೋ ನೋಡಿದ್ದಾರೆ. ವಿಡಿಯೋದಲ್ಲಿ ಈ ಷೇರಿನಲ್ಲಿ ಹಣ ಹೂಡಿದರೆ ನಿಮ್ಮ ಹಣ ಡಬಲ್ ಆಗೋದು ಖಚಿತ, ಇದಕ್ಕೆ ಕೇಂದ್ರ ಸರ್ಕಾರ ಗ್ಯಾರಂಟಿ ನೀಡುತ್ತದೆ ಎಂಬಿತ್ಯಾದಿಯಾಗಿ ಜನರನ್ನು ನಂಬಿಸುವ ರೀತಿ ವಿಡಿಯೋಗಳಿದ್ದವು.
ಇದನ್ನು ನಂಬಿದ ಮಹಿಳೆ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ತನ್ನ ಹೆಸರು ನೋಂದಣಿ ಮಾಡಿದ್ದಾರೆ. ಅದೇ ದಿನ ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಹೂಡಿಕೆ ಮಾಡಲು 20,664 ರೂ. ಹಣ ಪಾವತಿಸುವಂತೆ ತಿಳಿಸಿದ್ದಾನೆ. ಅದರಂತೆ ಮಹಿಳೆ ಹಣ ಡಿಕೆ ಪಾವತಿಸಿದ್ದಾರೆ.
ಆನಂತರ ವ್ಯಕ್ತಿ ತಿಳಿಸಿದಂತೆ ಆ ಕಂಪನಿಯ ವೆಬ್ಸೈಟ್ನಲ್ಲಿ ಲಾಗಿನ್ ಕೂಡ ಆಗಿದ್ದಾರೆ. ಅದೇ ದಿನ ಇನ್ನೊಬ್ಬ ಅಪರಿಚಿತ ವ್ಯಕ್ತಿ ಮೆಸೇಜ್ ಮತ್ತು ಕರೆ ಮಾಡಿ ಹೂಡಿಕೆ ಮೂಲಕ ಹೆಚ್ಚು ಹಣ ಲಾಭ ಗಳಿಸಬಹುದು ಎಂದು ತಿಳಿಸಿದ್ದಾನೆ. ಅದರಂತೆ, ಡಬಲ್ ಆಗುತ್ತೆ ಎಂಬ ನಂಬಿಕೆಯಲ್ಲಿ 8.90 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹೀಗೆ ಒಟ್ಟು 9,10,664 ರೂ. ಹೂಡಿಕೆ ಮಾಡಿದ್ದು ಬಳಿಕ ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟಬೇಕು ಎಂದು ಹೇಳಿದ್ದು ಮಹಿಳೆ ತಾನು ಮೋಸ ಹೋಗಿರುವ ಶಂಕೆ ಉಂಟಾಗಿದೆ. ಇದರಿಂದ ಮಹಿಳೆ ಪೊಲೀಸ್ ದೂರು ನೀಡಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
A woman from Mangaluru lost ₹9.10 lakh after believing an AI-generated video circulating on Facebook that used the names of Infosys Foundation’s Sudha Murty and Union Finance Minister Nirmala Sitharaman. The video falsely claimed that investments in a certain scheme would double with government guarantee.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm