ಬ್ರೇಕಿಂಗ್ ನ್ಯೂಸ್
27-12-20 09:12 pm Mangaluru Correspondent ಕ್ರೈಂ
ಮಂಗಳೂರು, ಡಿ.27: ಬೈಕಿನಲ್ಲಿ ಬಂದು ಸರ ಕದಿಯೋದನ್ನು ಕೇಳಿದ್ದೇವೆ. ಒಬ್ಬಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಯುವಕರು ಸರ ಕಿತ್ತು ಓಡುತ್ತಿರುವುದನ್ನು ಕಂಡಿದ್ದೇವೆ. ಆದರೆ, ಈಗ ಕಳ್ಳರು ಕದಿಯೋದರಲ್ಲೂ ಹೈ ಫೈ ಆಗುತ್ತಿದ್ದಾರೆ. ಮಂಗಳೂರಿನಲ್ಲಿ ಆಟೋದಲ್ಲಿ ಬಂದು ರಾತ್ರೋರಾತ್ರಿ ತಲೆಗೆ ದೊಣ್ಣೆಯಲ್ಲಿ ಹೊಡೆದು ಕಳವು ಮಾಡೋ ಹೊಸ ರೀತಿಯ ಪ್ರಯೋಗ ಆರಂಭವಾಗಿದೆ.
ಮಂಗಳೂರಿನ ಬಂದರು ಮತ್ತು ಉಳ್ಳಾಲದಲ್ಲಿ ಡಿ.25ರಂದು ರಾತ್ರಿ ಒಂದೇ ದಿನ ಹೀಗೆ ವಿಭಿನ್ನ ರೀತಿಯ ಕಳವು ಕೃತ್ಯ ನಡೆದಿದೆ. ಬಂದರಿನಲ್ಲಿ ಪ್ರಭುದೇವ್ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದಾಗ, ಆಟೋದಲ್ಲಿ ಬಂದ ವ್ಯಕ್ತಿ ದೊಣ್ಣೆಯಿಂದ ತಲೆಗೆ ಬಡಿದಿದ್ದಾನೆ. ಪ್ರಭುದೇವ್ ಬಳಿಯಿದ್ದ ಮೊಬೈಲನ್ನು ಕಿತ್ತುಕೊಂಡು ಆಟೋದಲ್ಲಿ ಬಂದಿದ್ದ ವ್ಯಕ್ತಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ.

ಇದೇ ರೀತಿಯ ಪ್ರಕರಣ ಉಳ್ಳಾಲದಲ್ಲಿಯೂ ಅದೇ ದಿನ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ ಜಾಫರ್ ಎಂಬ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಟೋದಲ್ಲಿ ಬಂದ ವ್ಯಕ್ತಿ ತಲೆಗೆ ಹೊಡೆದಿದ್ದು ಆತ ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಮೊಬೈಲ್ ಎಗರಿಸಿ ಓಡಿದ್ದಾರೆ.
ಆಟೋದಲ್ಲಿ ಚಾಲಕ ಮತ್ತು ಹಿಂಭಾಗದ ಸೀಟಿನಲ್ಲಿ ಮತ್ತೊಬ್ಬ ಇದ್ದ ಎಂದು ಪೊಲೀಸ್ ದೂರು ನೀಡಲಾಗಿದೆ. ಎರಡು ಪ್ರಕರಣವೂ ಬಂದರು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಟ್ಯಾಕ್ಸಿ ಆಟೋದಲ್ಲಿ ಬಂದು ಹೀಗೆ ದೊಣ್ಣೆಯಲ್ಲಿ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್, ಹಣ ಹೀಗೆ ಎಲ್ಲವನ್ನೂ ಕಿತ್ತುಕೊಂಡು ಹೋಗುತ್ತಿರುವುದು ಹೊಸ ರೀತಿಯ ಅಪರಾಧ ಆಗಿದ್ದು ಪೊಲೀಸರು ಇನ್ನಷ್ಟೇ ಈ ಬಗ್ಗೆ ಎಚ್ಚತ್ತುಕೊಳ್ಳಬೇಕಷ್ಟೆ.
Mangalore city has now witnessed Robbers arriving in auto-rickshaw Attacking persons and snatching their Mobile phones and cash. A case has been reported in Bunder and Ullal Police station.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 03:31 pm
Mangalore Correspondent
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm