ಬ್ರೇಕಿಂಗ್ ನ್ಯೂಸ್
27-12-20 09:12 pm Mangaluru Correspondent ಕ್ರೈಂ
ಮಂಗಳೂರು, ಡಿ.27: ಬೈಕಿನಲ್ಲಿ ಬಂದು ಸರ ಕದಿಯೋದನ್ನು ಕೇಳಿದ್ದೇವೆ. ಒಬ್ಬಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಯುವಕರು ಸರ ಕಿತ್ತು ಓಡುತ್ತಿರುವುದನ್ನು ಕಂಡಿದ್ದೇವೆ. ಆದರೆ, ಈಗ ಕಳ್ಳರು ಕದಿಯೋದರಲ್ಲೂ ಹೈ ಫೈ ಆಗುತ್ತಿದ್ದಾರೆ. ಮಂಗಳೂರಿನಲ್ಲಿ ಆಟೋದಲ್ಲಿ ಬಂದು ರಾತ್ರೋರಾತ್ರಿ ತಲೆಗೆ ದೊಣ್ಣೆಯಲ್ಲಿ ಹೊಡೆದು ಕಳವು ಮಾಡೋ ಹೊಸ ರೀತಿಯ ಪ್ರಯೋಗ ಆರಂಭವಾಗಿದೆ.
ಮಂಗಳೂರಿನ ಬಂದರು ಮತ್ತು ಉಳ್ಳಾಲದಲ್ಲಿ ಡಿ.25ರಂದು ರಾತ್ರಿ ಒಂದೇ ದಿನ ಹೀಗೆ ವಿಭಿನ್ನ ರೀತಿಯ ಕಳವು ಕೃತ್ಯ ನಡೆದಿದೆ. ಬಂದರಿನಲ್ಲಿ ಪ್ರಭುದೇವ್ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದಾಗ, ಆಟೋದಲ್ಲಿ ಬಂದ ವ್ಯಕ್ತಿ ದೊಣ್ಣೆಯಿಂದ ತಲೆಗೆ ಬಡಿದಿದ್ದಾನೆ. ಪ್ರಭುದೇವ್ ಬಳಿಯಿದ್ದ ಮೊಬೈಲನ್ನು ಕಿತ್ತುಕೊಂಡು ಆಟೋದಲ್ಲಿ ಬಂದಿದ್ದ ವ್ಯಕ್ತಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ.

ಇದೇ ರೀತಿಯ ಪ್ರಕರಣ ಉಳ್ಳಾಲದಲ್ಲಿಯೂ ಅದೇ ದಿನ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ ಜಾಫರ್ ಎಂಬ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಟೋದಲ್ಲಿ ಬಂದ ವ್ಯಕ್ತಿ ತಲೆಗೆ ಹೊಡೆದಿದ್ದು ಆತ ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಮೊಬೈಲ್ ಎಗರಿಸಿ ಓಡಿದ್ದಾರೆ.
ಆಟೋದಲ್ಲಿ ಚಾಲಕ ಮತ್ತು ಹಿಂಭಾಗದ ಸೀಟಿನಲ್ಲಿ ಮತ್ತೊಬ್ಬ ಇದ್ದ ಎಂದು ಪೊಲೀಸ್ ದೂರು ನೀಡಲಾಗಿದೆ. ಎರಡು ಪ್ರಕರಣವೂ ಬಂದರು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಟ್ಯಾಕ್ಸಿ ಆಟೋದಲ್ಲಿ ಬಂದು ಹೀಗೆ ದೊಣ್ಣೆಯಲ್ಲಿ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್, ಹಣ ಹೀಗೆ ಎಲ್ಲವನ್ನೂ ಕಿತ್ತುಕೊಂಡು ಹೋಗುತ್ತಿರುವುದು ಹೊಸ ರೀತಿಯ ಅಪರಾಧ ಆಗಿದ್ದು ಪೊಲೀಸರು ಇನ್ನಷ್ಟೇ ಈ ಬಗ್ಗೆ ಎಚ್ಚತ್ತುಕೊಳ್ಳಬೇಕಷ್ಟೆ.
Mangalore city has now witnessed Robbers arriving in auto-rickshaw Attacking persons and snatching their Mobile phones and cash. A case has been reported in Bunder and Ullal Police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm