ಬ್ರೇಕಿಂಗ್ ನ್ಯೂಸ್
27-12-20 09:12 pm Mangaluru Correspondent ಕ್ರೈಂ
ಮಂಗಳೂರು, ಡಿ.27: ಬೈಕಿನಲ್ಲಿ ಬಂದು ಸರ ಕದಿಯೋದನ್ನು ಕೇಳಿದ್ದೇವೆ. ಒಬ್ಬಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಯುವಕರು ಸರ ಕಿತ್ತು ಓಡುತ್ತಿರುವುದನ್ನು ಕಂಡಿದ್ದೇವೆ. ಆದರೆ, ಈಗ ಕಳ್ಳರು ಕದಿಯೋದರಲ್ಲೂ ಹೈ ಫೈ ಆಗುತ್ತಿದ್ದಾರೆ. ಮಂಗಳೂರಿನಲ್ಲಿ ಆಟೋದಲ್ಲಿ ಬಂದು ರಾತ್ರೋರಾತ್ರಿ ತಲೆಗೆ ದೊಣ್ಣೆಯಲ್ಲಿ ಹೊಡೆದು ಕಳವು ಮಾಡೋ ಹೊಸ ರೀತಿಯ ಪ್ರಯೋಗ ಆರಂಭವಾಗಿದೆ.
ಮಂಗಳೂರಿನ ಬಂದರು ಮತ್ತು ಉಳ್ಳಾಲದಲ್ಲಿ ಡಿ.25ರಂದು ರಾತ್ರಿ ಒಂದೇ ದಿನ ಹೀಗೆ ವಿಭಿನ್ನ ರೀತಿಯ ಕಳವು ಕೃತ್ಯ ನಡೆದಿದೆ. ಬಂದರಿನಲ್ಲಿ ಪ್ರಭುದೇವ್ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದಾಗ, ಆಟೋದಲ್ಲಿ ಬಂದ ವ್ಯಕ್ತಿ ದೊಣ್ಣೆಯಿಂದ ತಲೆಗೆ ಬಡಿದಿದ್ದಾನೆ. ಪ್ರಭುದೇವ್ ಬಳಿಯಿದ್ದ ಮೊಬೈಲನ್ನು ಕಿತ್ತುಕೊಂಡು ಆಟೋದಲ್ಲಿ ಬಂದಿದ್ದ ವ್ಯಕ್ತಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ.

ಇದೇ ರೀತಿಯ ಪ್ರಕರಣ ಉಳ್ಳಾಲದಲ್ಲಿಯೂ ಅದೇ ದಿನ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ ಜಾಫರ್ ಎಂಬ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಟೋದಲ್ಲಿ ಬಂದ ವ್ಯಕ್ತಿ ತಲೆಗೆ ಹೊಡೆದಿದ್ದು ಆತ ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಮೊಬೈಲ್ ಎಗರಿಸಿ ಓಡಿದ್ದಾರೆ.
ಆಟೋದಲ್ಲಿ ಚಾಲಕ ಮತ್ತು ಹಿಂಭಾಗದ ಸೀಟಿನಲ್ಲಿ ಮತ್ತೊಬ್ಬ ಇದ್ದ ಎಂದು ಪೊಲೀಸ್ ದೂರು ನೀಡಲಾಗಿದೆ. ಎರಡು ಪ್ರಕರಣವೂ ಬಂದರು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಟ್ಯಾಕ್ಸಿ ಆಟೋದಲ್ಲಿ ಬಂದು ಹೀಗೆ ದೊಣ್ಣೆಯಲ್ಲಿ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್, ಹಣ ಹೀಗೆ ಎಲ್ಲವನ್ನೂ ಕಿತ್ತುಕೊಂಡು ಹೋಗುತ್ತಿರುವುದು ಹೊಸ ರೀತಿಯ ಅಪರಾಧ ಆಗಿದ್ದು ಪೊಲೀಸರು ಇನ್ನಷ್ಟೇ ಈ ಬಗ್ಗೆ ಎಚ್ಚತ್ತುಕೊಳ್ಳಬೇಕಷ್ಟೆ.
Mangalore city has now witnessed Robbers arriving in auto-rickshaw Attacking persons and snatching their Mobile phones and cash. A case has been reported in Bunder and Ullal Police station.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm