ಬ್ರೇಕಿಂಗ್ ನ್ಯೂಸ್
27-12-20 09:12 pm Mangaluru Correspondent ಕ್ರೈಂ
ಮಂಗಳೂರು, ಡಿ.27: ಬೈಕಿನಲ್ಲಿ ಬಂದು ಸರ ಕದಿಯೋದನ್ನು ಕೇಳಿದ್ದೇವೆ. ಒಬ್ಬಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಯುವಕರು ಸರ ಕಿತ್ತು ಓಡುತ್ತಿರುವುದನ್ನು ಕಂಡಿದ್ದೇವೆ. ಆದರೆ, ಈಗ ಕಳ್ಳರು ಕದಿಯೋದರಲ್ಲೂ ಹೈ ಫೈ ಆಗುತ್ತಿದ್ದಾರೆ. ಮಂಗಳೂರಿನಲ್ಲಿ ಆಟೋದಲ್ಲಿ ಬಂದು ರಾತ್ರೋರಾತ್ರಿ ತಲೆಗೆ ದೊಣ್ಣೆಯಲ್ಲಿ ಹೊಡೆದು ಕಳವು ಮಾಡೋ ಹೊಸ ರೀತಿಯ ಪ್ರಯೋಗ ಆರಂಭವಾಗಿದೆ.
ಮಂಗಳೂರಿನ ಬಂದರು ಮತ್ತು ಉಳ್ಳಾಲದಲ್ಲಿ ಡಿ.25ರಂದು ರಾತ್ರಿ ಒಂದೇ ದಿನ ಹೀಗೆ ವಿಭಿನ್ನ ರೀತಿಯ ಕಳವು ಕೃತ್ಯ ನಡೆದಿದೆ. ಬಂದರಿನಲ್ಲಿ ಪ್ರಭುದೇವ್ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದಾಗ, ಆಟೋದಲ್ಲಿ ಬಂದ ವ್ಯಕ್ತಿ ದೊಣ್ಣೆಯಿಂದ ತಲೆಗೆ ಬಡಿದಿದ್ದಾನೆ. ಪ್ರಭುದೇವ್ ಬಳಿಯಿದ್ದ ಮೊಬೈಲನ್ನು ಕಿತ್ತುಕೊಂಡು ಆಟೋದಲ್ಲಿ ಬಂದಿದ್ದ ವ್ಯಕ್ತಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ.

ಇದೇ ರೀತಿಯ ಪ್ರಕರಣ ಉಳ್ಳಾಲದಲ್ಲಿಯೂ ಅದೇ ದಿನ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ ಜಾಫರ್ ಎಂಬ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಟೋದಲ್ಲಿ ಬಂದ ವ್ಯಕ್ತಿ ತಲೆಗೆ ಹೊಡೆದಿದ್ದು ಆತ ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಮೊಬೈಲ್ ಎಗರಿಸಿ ಓಡಿದ್ದಾರೆ.
ಆಟೋದಲ್ಲಿ ಚಾಲಕ ಮತ್ತು ಹಿಂಭಾಗದ ಸೀಟಿನಲ್ಲಿ ಮತ್ತೊಬ್ಬ ಇದ್ದ ಎಂದು ಪೊಲೀಸ್ ದೂರು ನೀಡಲಾಗಿದೆ. ಎರಡು ಪ್ರಕರಣವೂ ಬಂದರು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಟ್ಯಾಕ್ಸಿ ಆಟೋದಲ್ಲಿ ಬಂದು ಹೀಗೆ ದೊಣ್ಣೆಯಲ್ಲಿ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್, ಹಣ ಹೀಗೆ ಎಲ್ಲವನ್ನೂ ಕಿತ್ತುಕೊಂಡು ಹೋಗುತ್ತಿರುವುದು ಹೊಸ ರೀತಿಯ ಅಪರಾಧ ಆಗಿದ್ದು ಪೊಲೀಸರು ಇನ್ನಷ್ಟೇ ಈ ಬಗ್ಗೆ ಎಚ್ಚತ್ತುಕೊಳ್ಳಬೇಕಷ್ಟೆ.
Mangalore city has now witnessed Robbers arriving in auto-rickshaw Attacking persons and snatching their Mobile phones and cash. A case has been reported in Bunder and Ullal Police station.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm