ಬ್ರೇಕಿಂಗ್ ನ್ಯೂಸ್
07-10-25 10:31 am HK News Desk ಕ್ರೈಂ
ಕಾಸರಗೋಡು, ಅ.7 : ಕುಂಬಳೆ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಎಂಬಲ್ಲಿ ಭಾನುವಾರ ತಡರಾತ್ರಿ ಎರಡು ತಂಡಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು ಈ ವೇಳೆ ಯುವಕನೊಬ್ಬನ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಅಲ್ಲಿಯೇ ಸಿಕ್ಕಿಕೊಂಡ ಘಟನೆ ನಡೆದಿದೆ. ಗ್ಯಾಂಗ್ ವಾರ್ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.
ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ಬದಿಯಡ್ಕ ಮತ್ತು ಸೀತಾಂಗೋಳಿಯ ಎರಡು ತಂಡಗಳ ಮಧ್ಯೆ ಹೊಡೆದಾಟ, ಚೂರಿ ಹಿಡಿದು ಬೀದಿ ಕಾಳಗ ನಡೆದಿದೆ. ಕಾರು, ಜೀಪಿನಲ್ಲಿ ಬಂದಿದ್ದ ಬದಿಯಡ್ಕದ ತಂಡವೊಂದು ರಸ್ತೆಯಲ್ಲಿ ನಿಂತಿದ್ದ ಜನರ ಮೇಲೆ ಕಾರು ಹಾಯಿಸಲು ಯತ್ನಿಸಿದೆ. ಗಲಾಟೆ ಮಧ್ಯೆ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಚಾಕು ಹಾಕಿದಾಗಲೇ ಪೊಲೀಸ್ ಜೀಪು ಬಂದಿದ್ದು ಚಾಕುವನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕುತ್ತಿಗೆಯಲ್ಲಿ ಚಾಕು ಸಿಕ್ಕಿಕೊಂಡಿರುವ ಫೋಟೊ ವೈರಲ್ ಆಗಿದ್ದು ಭಯಾನಕ ದೃಶ್ಯಕ್ಕೆ ಸಾಕ್ಷಿಯಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.




ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಇರಿತದಿಂದ ಗಂಭೀರ ಗಾಯಗೊಂಡು ರಕ್ತದ ಓಕುಳಿಯಲ್ಲಿ ನೆಲಕ್ಕೆ ಬೀಳುವ ದೃಶ್ಯವೂ ಮೊಬೈಲಿನಲ್ಲಿ ಸೆರೆಯಾಗಿದೆ. ಚೂರಿ ಇರಿತ ಮಾಡುತ್ತಿದ್ದಾಗಲೇ ಅಲ್ಲಿಯೇ ಇನ್ನೊಬ್ಬ ವಿಡಿಯೋ ಮಾಡಿರುವುದು ಕಂಡುಬರುತ್ತದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
A violent gang clash broke out late Sunday night in Seethangoli, under Kumbla Police Station limits of Kasaragod district. Two rival groups from Badiyadka and Seethangoli reportedly fought over a financial dispute, leading to a brutal street brawl involving knives. During the fight, a youth named Anil Kumar from Badiyadka was stabbed in the neck, and the knife remained lodged in the wound. The shocking visuals of the incident have gone viral on social media.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm