ಬ್ರೇಕಿಂಗ್ ನ್ಯೂಸ್
07-10-25 10:31 am HK News Desk ಕ್ರೈಂ
ಕಾಸರಗೋಡು, ಅ.7 : ಕುಂಬಳೆ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಎಂಬಲ್ಲಿ ಭಾನುವಾರ ತಡರಾತ್ರಿ ಎರಡು ತಂಡಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು ಈ ವೇಳೆ ಯುವಕನೊಬ್ಬನ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಅಲ್ಲಿಯೇ ಸಿಕ್ಕಿಕೊಂಡ ಘಟನೆ ನಡೆದಿದೆ. ಗ್ಯಾಂಗ್ ವಾರ್ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.
ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ಬದಿಯಡ್ಕ ಮತ್ತು ಸೀತಾಂಗೋಳಿಯ ಎರಡು ತಂಡಗಳ ಮಧ್ಯೆ ಹೊಡೆದಾಟ, ಚೂರಿ ಹಿಡಿದು ಬೀದಿ ಕಾಳಗ ನಡೆದಿದೆ. ಕಾರು, ಜೀಪಿನಲ್ಲಿ ಬಂದಿದ್ದ ಬದಿಯಡ್ಕದ ತಂಡವೊಂದು ರಸ್ತೆಯಲ್ಲಿ ನಿಂತಿದ್ದ ಜನರ ಮೇಲೆ ಕಾರು ಹಾಯಿಸಲು ಯತ್ನಿಸಿದೆ. ಗಲಾಟೆ ಮಧ್ಯೆ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಚಾಕು ಹಾಕಿದಾಗಲೇ ಪೊಲೀಸ್ ಜೀಪು ಬಂದಿದ್ದು ಚಾಕುವನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕುತ್ತಿಗೆಯಲ್ಲಿ ಚಾಕು ಸಿಕ್ಕಿಕೊಂಡಿರುವ ಫೋಟೊ ವೈರಲ್ ಆಗಿದ್ದು ಭಯಾನಕ ದೃಶ್ಯಕ್ಕೆ ಸಾಕ್ಷಿಯಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.




ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಇರಿತದಿಂದ ಗಂಭೀರ ಗಾಯಗೊಂಡು ರಕ್ತದ ಓಕುಳಿಯಲ್ಲಿ ನೆಲಕ್ಕೆ ಬೀಳುವ ದೃಶ್ಯವೂ ಮೊಬೈಲಿನಲ್ಲಿ ಸೆರೆಯಾಗಿದೆ. ಚೂರಿ ಇರಿತ ಮಾಡುತ್ತಿದ್ದಾಗಲೇ ಅಲ್ಲಿಯೇ ಇನ್ನೊಬ್ಬ ವಿಡಿಯೋ ಮಾಡಿರುವುದು ಕಂಡುಬರುತ್ತದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
A violent gang clash broke out late Sunday night in Seethangoli, under Kumbla Police Station limits of Kasaragod district. Two rival groups from Badiyadka and Seethangoli reportedly fought over a financial dispute, leading to a brutal street brawl involving knives. During the fight, a youth named Anil Kumar from Badiyadka was stabbed in the neck, and the knife remained lodged in the wound. The shocking visuals of the incident have gone viral on social media.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm