ಬ್ರೇಕಿಂಗ್ ನ್ಯೂಸ್
07-10-25 10:13 pm Mangalore Correspondent ಕ್ರೈಂ
ಮಂಗಳೂರು, ಅ.7 : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಕಪ್ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್ ವಾಹನ ಹಾಗೂ ಬೈಕ್ನ್ನು ಸುರತ್ಕಲ್ ಪೊಲೀಸರು ವಶಪಡಿಸಿದ್ದಾರೆ.
ಸೆ.30ರಂದು ರಾತ್ರಿ ಸುಮಾರು 9 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯ ಸುಕುಮಾರ್ ಎಂಬವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ರಾತ್ರಿ 10 ಗಂಟೆಗೆ ನೋಡಿದಾಗ ಪಿಕಪ್ ವಾಹನವು ಇಲ್ಲದೇ ಇದ್ದು, ರಾತ್ರಿ ಯಾರೋ ಕಳವು ಮಾಡಿಕೊಂಡು ಹೋಗಿದ್ದಾರೆಂದು ಅ.3 ರಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದ ಪೊಲೀಸರು ಅ.7ರಂದು ಬೈಕ್ವೊಂದರಲ್ಲಿ ಅನುಮಾನಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಯುವಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ತಿರುವನಂತಪುರಂ ನಿವಾಸಿ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್(29) ಎಂದು ಗುರುತಿಸಲಾಗಿದೆ. ಆತ ಚಲಾಯಿಸುತ್ತಿದ್ದ ಬೈಕ್ಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಬೈಕ್ನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಫಾರಂ ಮಾಲ್ ಬಳಿಯಿಂದ ಕಳ್ಳತನ ಮಾಡಿರುವುದಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ವ್ಯಕ್ತಿ ಅ.30ರಂದು ಕುಳಾಯಿ ಬಳಿಯಿಂದ KA-19-AE-8017 ನೇ ನಂಬ್ರದ ಪಿಕಪ್ ವಾಹನವನ್ನು ಕಳವು ಮಾಡಿರುವುದು ತನಿಖೆಯಿಂದ ತಿಳಿದುಬಂದಿದ್ದು ಈ ಎರಡು ವಾಹನಗಳನ್ನು ಸ್ವಾಧೀನಪಡಿಸಲಾಗಿದೆ. ಸ್ವಾಧೀನಪಡಿಸಿಕೊಂಡ ವಾಹನಗಳ ಒಟ್ಟು ಮೊತ್ತ ರೂ. 3,10,000/- ಆಗಬಹುದು.
ಆರೋಪಿ ಹಂಝ ಕುಪ್ಪಿಕಂಡ ಕುಖ್ಯಾತ ಕಳ್ಳತನ ಆರೋಪಿಯಾಗಿದ್ದು, ಈತನ ವಿರುದ್ಧ ಕೇರಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೊಬೈಲ್ ಕಳ್ಳತನ, ವಾಹನ ಕಳ್ಳತನ ಸೇರಿದಂತೆ ಸುಮಾರು 17 ಪ್ರಕರಣ ದಾಖಲಾಗಿರುತ್ತದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸುರತ್ಕಲ್ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್ಐ ಶಶಿಧರ ಶೆಟ್ಟಿ, ಎಎಸ್ಐ ರಾಜೇಶ್ ಆಳ್ವ, ಸಿಬ್ಬಂದಿಯವರಾದ ಉಮೇಶ್, ವಿನೋದ್ ಕುಮಾರ್, ನಾಗರಾಜ್, ಸುನೀಲ್ ಕುಮಾರ್ ತನಿಖೆ ನಡೆಸಿರುತ್ತಾರೆ.
Police in Suratkal have arrested an interstate vehicle thief from Kerala and recovered a stolen pickup truck and motorbike in separate theft cases.
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm