ಬ್ರೇಕಿಂಗ್ ನ್ಯೂಸ್
08-10-25 12:23 pm Mangalore Correspondent ಕ್ರೈಂ
ಮಂಗಳೂರು, ಅ.8 : ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಗಂಟಾಲ್ಕಟ್ಟೆಯಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಮೂಡುಬಿದ್ರೆ ಪೊಲೀಸರು ದಾಳಿ ನಡೆಸಿ ಮೂರು ದನಗಳನ್ನು ರಕ್ಷಿಸಿದ್ದಾರೆ.
ಜಲೀಲ್ ಕಲ್ಲಬೆಟ್ಟು ಎಂಬಾತನ ಮನೆಯ ಹಿಂಭಾಗದ ಗುಡ್ಡದಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ದನ ಕಡಿದು ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸುಮಾರು 50 ಕೆ.ಜಿ. ದನದ ಮಾಂಸ ಮತ್ತು ಅದನ್ನು ಕತ್ತರಿಸಲು ಬಳಸಿದ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಜಲೀಲ್ ಕಲ್ಲಬೆಟ್ಟು, ಸಾಹಿಲ್ ಮತ್ತು ಆತನ ಮಗ ಸೊಹೇಲ್, ಹಾಗೂ ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಆದರೆ ಪೊಲೀಸರು ದಾಳಿ ಮಾಡುತ್ತಿದ್ದಂತೆ ಆರೋಪಿಗಳು ಮನೆಯ ಹಿಂಬದಿಯ ಗುಡ್ಡದಾಚೆ ಓಡಿ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಮಾಂಸವನ್ನು ಪಡೆಯಲು ಬಂದಿದ್ದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಮತ್ತು ಸಿಬ್ಬಂದಿಗಳಾದ ಪಿಎಸ್ಐ ಕೃಷ್ಣಪ್ಪ, ಅಖೀಲ್ ಅಹ್ಮದ್ ಹಾಗೂ ನಾಗರಾಜ್ ಕಾರ್ಯಾಚರಣೆ ನಡೆಸಿದ್ದರು.
ಕಾಟಿಪಳ್ಳದ ಮನೆಯಲ್ಲೇ ಗೋಹತ್ಯೆ
ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟು ಅಂಚೆ ಕಚೇರಿ ರಸ್ತೆಯ ಅಬ್ದುಲ್ ಖಾದರ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನ ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಸುರತ್ಕಲ್ ಪೊಲೀಸ್ ಠಾಣೆ ಪಿಎಸ್ಐ ರಘುನಾಯಕ್ ಹಾಗೂ ಸಿಬಂದಿ ದಾಳಿ ಮಾಡಿ ಮೂವರು ಆರೋಪಿಗಳಾದ ಚೊಕ್ಕಬೆಟ್ಟುವಿನ ಅಜೀಜ್ ಅಹಮ್ಮದ್, (55) ಇಮ್ಮಿಯಾಜ್ (41) ಎ.ಕೆ. ಆಶೀಕ್, (22) ಅವರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಬಶೀರ್ ಚೊಕ್ಕಬೆಟ್ಟು ತಲೆಮರೆಸಿಕೊಂಡಿದ್ದಾನೆ. ಇಮ್ಮಿಯಾಜ್ ತಂದಿದ್ದ 2 ಹೆಣ್ಣು ಕರುಗಳನ್ನು ಬಶೀರ್ ಹಾಗೂ ಆಶೀಕ್ ಜತೆ ಸೇರಿಕೊಂಡು ವಧೆ ಮಾಡಿ ಸುಮಾರು 233.89 ಕೆಜಿ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲು ಮುಂದಾಗಿದ್ದರು.
ಇಮ್ಮಿಯಾಜ್ ಮೇಲೆ ಮಂಗಳೂರು ನಗರದ ಬರ್ಕೆ, ಮೂಡುಬಿದಿರೆ, ಪಣಂ ಬೂರು, ಸುರತ್ಕಲ್ ಠಾಣೆ ಸೇರಿದಂತೆ ಉಡುಪಿ ಜಿಲ್ಲೆಯ ಕಾಪು, ಕುಂದಾಪುರ, ಕಾರ್ಕಳ ಠಾಣೆಯಲ್ಲಿ ಸುಮಾರು 9 ಪ್ರಕರಣಗಳು ದಾಖಲಾಗಿವೆ.
Police in Mangaluru have busted two illegal slaughterhouses operating in Moodbidri and Suratkal, seizing around 280 kilograms of beef and rescuing three cows. In Moodbidri’s Gantalkatte area, police raided the residence of Jaleel Kallabettu after receiving a tip-off about cow slaughter taking place behind his house.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm