ಬ್ರೇಕಿಂಗ್ ನ್ಯೂಸ್
08-10-25 08:47 pm HK News Desk ಕ್ರೈಂ
ಕಾರವಾರ, ಅ.8: ದುಬೈ, ಕುವೈತ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಕೇರಳ, ಕರ್ನಾಟಕದ ಹಲವಾರು ಮಂದಿಯಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವ ಘಟನೆ ಬಗ್ಗೆ ಹೊನ್ನಾವರದಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಬ್ಬರು ಹಾಗೂ ಹೈದ್ರಾಬಾದ್ ಮೂಲಕ ಮಹಿಳೆ ಹಣ ಪಡೆದು ವಂಚಿಸಿದ್ದಾಗಿ ಆರೋಪ ಕೇಳಿಬಂದಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೊಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದ್ರಾಬಾದ್ ನ ಸುಜಾತ ಜಮ್ಮಿ ಕುಂಟ ಎಂಬ ಮಹಿಳೆ ದುಬೈನಲ್ಲಿ ಉದ್ಯೋಗ ನೀಡುವ ಆಸೆ ತೋರಿಸಿ ಲಕ್ಷಾಂತರ ರೂ ಹಣ ಲಪಟಾಯಿಸಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಕರ್ನಾಟಕ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ ನಿರುದ್ಯೋಗಿ ಯುವಕರಿಗೆ ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಖಾಲಿ ಇದೆ ಎಂದು ಜಾಲತಾಣದ ಮೂಲಕ ಪ್ರಕಟಣೆ ನೀಡಿದ್ದರು. ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಬಳ ಸಿಗಲಿದೆ ಎಂದು ಹಲವಾರು ಮಂದಿಯನ್ನು ನಂಬಿಸಿ, ವೀಸಾ ತೆಗೆಸಿಕೊಡುತ್ತೇವೆಂದು ಹೇಳಿ ಒಟ್ಟು 52 ಲಕ್ಷ ರೂ. ಹಣ ವರ್ಗಾವಣೆ ಮಾಡಿಸಿಕೊಂಡು ಈಗ ನಾಪತ್ತೆಯಾಗಿದ್ದಾರೆ.
ದುಬೈ ಉದ್ಯೋಗಕ್ಕಾಗಿ ಹಣ ಕೊಟ್ಟವರಿಗೆ, ಕಾಗದ ಪತ್ರಗಳನ್ನು ನಾವೇ ಮಾಡಿಸಿ ಕೊಡುತ್ತೇವೆ. ನೀವು ಪಾಸ್ಪೋರ್ಟ್ ರೆಡಿ ಮಾಡಿ. ವೀಸಾ ಬಂದ ಕೂಡಲೇ ಹೋಗಬಹುದು ಎಂದು ಆಸೆ ತೋರಿಸಿದ್ದರು. ಆದರೆ ದಿನ ಕಳೆದಂತೆ ವೀಸಾ ಬರದೇ ಇದ್ದುದರಿಂದ ಮತ್ತು ಆರೋಪಿಗಳು ಸಂಪರ್ಕಕ್ಕೆ ಸಿಗದ್ದರಿಂದ ಹಣ ಕೊಟ್ಟವರಿಗೆ ಸಂಶಯ ಬಂದಿದೆ. ಹೀಗಾಗಿ ತಾವು ಮೋಸ ಹೋದ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು, ಕೇರಳ, ಕರ್ನಾಟಕ ಸೇರಿ ಇತರ ರಾಜ್ಯಗಳ ಜನರಿಗೂ ವಂಚಿಸಿದ್ದಾರೆಂದು ಹಣ ಕಳೆದುಕೊಂಡವರು ಆರೋಪಿಸಿದ್ದಾರೆ. ಕುವೈತ್ ಉದ್ಯೋಗ ನಂಬಿಕೊಂಡು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಯುವಕರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಮೋಸ ಮಾಡಿದ ಜಾಫರ್ ಸಾಧಿಕ್ ಸೇರಿ ಈ ಜಾಲದಲ್ಲಿರುವ ಎಲ್ಲರನ್ನೂ ಬಂಧಿಸಬೇಕೆಂದು ಒತ್ತಾಯ ಕೇಳಿಬಂದಿದೆ. ಆರೋಪಿತರು ಕುವೈತ್ ಮತ್ತು ಕೆನಡಾದ ಪೋನ್ ನಂಬರ್ ಉಪಯೋಗಿಸಿ ಇನ್ನಷ್ಟು ಅಮಾಯಕರಿಗೆ ಮೋಸ ಮಾಡುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸರು ಕೂಡಲೇ ಇವರನ್ನ ಬಂಧಿಸಬೇಕೆಂದು ಗಡಿನಾಡ ರಕ್ಷಣಾ ವೇದಿಕೆಯ ಸಿದ್ದಿಕ್ ತಲಪಾಡಿ ಒತ್ತಾಯಿಸಿದ್ದಾರೆ.
A major foreign job scam has come to light in Honnavar, Uttara Kannada, where three individuals allegedly cheated several unemployed youths from Karnataka and Kerala by promising high-paying jobs at a Kuwait Defence Hospital. The accused — Jaffar Sadiq Moktesar and Noushad Khwaja from Honnavar, along with Sujata Jammi Kunta from Hyderabad — reportedly collected ₹52 lakh from multiple victims before going missing.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm