ಬ್ರೇಕಿಂಗ್ ನ್ಯೂಸ್
08-10-25 08:47 pm HK News Desk ಕ್ರೈಂ
ಕಾರವಾರ, ಅ.8: ದುಬೈ, ಕುವೈತ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಕೇರಳ, ಕರ್ನಾಟಕದ ಹಲವಾರು ಮಂದಿಯಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವ ಘಟನೆ ಬಗ್ಗೆ ಹೊನ್ನಾವರದಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಇಬ್ಬರು ಹಾಗೂ ಹೈದ್ರಾಬಾದ್ ಮೂಲಕ ಮಹಿಳೆ ಹಣ ಪಡೆದು ವಂಚಿಸಿದ್ದಾಗಿ ಆರೋಪ ಕೇಳಿಬಂದಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೊಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದ್ರಾಬಾದ್ ನ ಸುಜಾತ ಜಮ್ಮಿ ಕುಂಟ ಎಂಬ ಮಹಿಳೆ ದುಬೈನಲ್ಲಿ ಉದ್ಯೋಗ ನೀಡುವ ಆಸೆ ತೋರಿಸಿ ಲಕ್ಷಾಂತರ ರೂ ಹಣ ಲಪಟಾಯಿಸಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಕರ್ನಾಟಕ, ಕೇರಳ ಸೇರಿದಂತೆ ವಿವಿಧ ರಾಜ್ಯಗಳ ನಿರುದ್ಯೋಗಿ ಯುವಕರಿಗೆ ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಖಾಲಿ ಇದೆ ಎಂದು ಜಾಲತಾಣದ ಮೂಲಕ ಪ್ರಕಟಣೆ ನೀಡಿದ್ದರು. ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಬಳ ಸಿಗಲಿದೆ ಎಂದು ಹಲವಾರು ಮಂದಿಯನ್ನು ನಂಬಿಸಿ, ವೀಸಾ ತೆಗೆಸಿಕೊಡುತ್ತೇವೆಂದು ಹೇಳಿ ಒಟ್ಟು 52 ಲಕ್ಷ ರೂ. ಹಣ ವರ್ಗಾವಣೆ ಮಾಡಿಸಿಕೊಂಡು ಈಗ ನಾಪತ್ತೆಯಾಗಿದ್ದಾರೆ.
ದುಬೈ ಉದ್ಯೋಗಕ್ಕಾಗಿ ಹಣ ಕೊಟ್ಟವರಿಗೆ, ಕಾಗದ ಪತ್ರಗಳನ್ನು ನಾವೇ ಮಾಡಿಸಿ ಕೊಡುತ್ತೇವೆ. ನೀವು ಪಾಸ್ಪೋರ್ಟ್ ರೆಡಿ ಮಾಡಿ. ವೀಸಾ ಬಂದ ಕೂಡಲೇ ಹೋಗಬಹುದು ಎಂದು ಆಸೆ ತೋರಿಸಿದ್ದರು. ಆದರೆ ದಿನ ಕಳೆದಂತೆ ವೀಸಾ ಬರದೇ ಇದ್ದುದರಿಂದ ಮತ್ತು ಆರೋಪಿಗಳು ಸಂಪರ್ಕಕ್ಕೆ ಸಿಗದ್ದರಿಂದ ಹಣ ಕೊಟ್ಟವರಿಗೆ ಸಂಶಯ ಬಂದಿದೆ. ಹೀಗಾಗಿ ತಾವು ಮೋಸ ಹೋದ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು, ಕೇರಳ, ಕರ್ನಾಟಕ ಸೇರಿ ಇತರ ರಾಜ್ಯಗಳ ಜನರಿಗೂ ವಂಚಿಸಿದ್ದಾರೆಂದು ಹಣ ಕಳೆದುಕೊಂಡವರು ಆರೋಪಿಸಿದ್ದಾರೆ. ಕುವೈತ್ ಉದ್ಯೋಗ ನಂಬಿಕೊಂಡು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಯುವಕರು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಮೋಸ ಮಾಡಿದ ಜಾಫರ್ ಸಾಧಿಕ್ ಸೇರಿ ಈ ಜಾಲದಲ್ಲಿರುವ ಎಲ್ಲರನ್ನೂ ಬಂಧಿಸಬೇಕೆಂದು ಒತ್ತಾಯ ಕೇಳಿಬಂದಿದೆ. ಆರೋಪಿತರು ಕುವೈತ್ ಮತ್ತು ಕೆನಡಾದ ಪೋನ್ ನಂಬರ್ ಉಪಯೋಗಿಸಿ ಇನ್ನಷ್ಟು ಅಮಾಯಕರಿಗೆ ಮೋಸ ಮಾಡುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸರು ಕೂಡಲೇ ಇವರನ್ನ ಬಂಧಿಸಬೇಕೆಂದು ಗಡಿನಾಡ ರಕ್ಷಣಾ ವೇದಿಕೆಯ ಸಿದ್ದಿಕ್ ತಲಪಾಡಿ ಒತ್ತಾಯಿಸಿದ್ದಾರೆ.
A major foreign job scam has come to light in Honnavar, Uttara Kannada, where three individuals allegedly cheated several unemployed youths from Karnataka and Kerala by promising high-paying jobs at a Kuwait Defence Hospital. The accused — Jaffar Sadiq Moktesar and Noushad Khwaja from Honnavar, along with Sujata Jammi Kunta from Hyderabad — reportedly collected ₹52 lakh from multiple victims before going missing.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm