ಬ್ರೇಕಿಂಗ್ ನ್ಯೂಸ್
10-10-25 07:43 pm Bangalore Correspondent ಕ್ರೈಂ
ಬೆಂಗಳೂರು, ಅ10 : ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯನ್ನ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಗೆ ಬೀಗ ಹಾಕಿಕೊಂಡುಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀ ಅಂಗಡಿ ಮಾಲೀಕನನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಪ್ಪಲೇಔಟ್ ನಿವಾಸಿ ಸಂದೀಪ್ (31) ಎಂದು ಗುರುತಿಸಲಾಗಿದೆ. ಅ.8 ರಂದು ಕೊಡಿಗೇಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಶೀಲ ಎಂಬುವವರು ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ ಹಾಗೂ ಸುತ್ತ-ಮುತ್ತ ಗಣತಿ ಕಾರ್ಯ ಮಾಡುತ್ತಿದ್ದರು.
ಅದರಂತೆ ಅ.8ರಂದು ಗಣತಿಗಾಗಿ ಆರೋಪಿ ಸಂದೀಪ್ ಮನೆಗೆ ಕೂಡ ಹೋಗಿದ್ದಾರೆ. ಈ ವೇಳೆ ಸುಶೀಲ ಅವರು ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ನೀಡುವಂತೆ ಸಂದೀಪ್ ತಾಯಿಯ ಬಳಿ ಕೇಳಿದ್ದಾರೆ. ಅದರಂತೆ ಒಟಿಪಿ ಎಲ್ಲಾ ಪಡೆದ ಬಳಿಕ ಸಂದೀಪ್ ಮನೆಗೆ ಬಂದಿದ್ದಾನೆ.
ಈ ವೇಳೆ ಶಿಕ್ಷಕಿ ಸುಶೀಲ ಜತೆ ಸಮೀಕ್ಷೆ ಬಗ್ಗೆ ಪ್ರಶ್ನಿಸಿದ್ದಾನೆ. ಅಲ್ಲದೆ, ಸಮೀಕ್ಷೆ ಮಾಡಲು ಯಾರು ನಿಮಗೆ ಹೇಳಿದವರು, ಯಾಕೆ ದಾಖಲೆಗಳನ್ನು ಕೊಡಬೇಕು, ನೀವು ಸರ್ಕಾರಿ ಸಿಬ್ಬಂದಿ ಎಂದು ಹೇಗೆ ನಂಬಬೇಕು ಎಂದೆಲ್ಲ ಏರು ದ್ವನಿಯಲ್ಲಿ ಪ್ರಶ್ನಿಸಿದ್ದಾನೆ.
ಆಗ ಸುಶೀಲ ಅವರು ತಮ್ಮ ಗುರುತಿನ ಚೀಟಿಯನ್ನು ತೋರಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಸಂದೀಪ್ ಶಿಕ್ಷಕಿಯ ಜೊತೆ ಗಲಾಟೆ ಮಾಡಿದ್ದಾನೆ, ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಜೊತೆಗೆ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಬೀಗ ಹಾಕಿ, ನಿಮ್ಮ ಕಂಪನಿಯವರನ್ನು ಕರೆಯಿಸುವಂತೆ ಹೇಳಿ ಅಲ್ಲಿಂದ ಹೋಗಿದ್ದಾನೆ.
ಇತ್ತ ಎಷ್ಟೇ ಮನವಿ ಮಾಡಿದರೂ ಕೇಳದಿದ್ದಾಗ ಸುಶೀಲ 112 ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಪೊಲೀಸರು ಶಿಕ್ಷಕಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿ ಸಂದೀಪ್ ನನ್ನು ಸ್ಥಳಕ್ಕೆ ಕರೆಸಿಕೊಂಡು, ಅಲ್ಲಿಂದಲೇ ನೇರವಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಸದ್ಯ ಶಿಕ್ಷಕಿ ಸುಶೀಲ ಅವರು ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನ್ಯಾಯಾಲಯದ ಸೂಚನೆಯ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A shocking incident occurred in Bhadrappa Layout, Kodigehalli, where a government school teacher conducting the caste census survey was allegedly locked inside a house compound and verbally abused by a local resident.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm