ಬ್ರೇಕಿಂಗ್ ನ್ಯೂಸ್
10-10-25 07:43 pm Bangalore Correspondent ಕ್ರೈಂ
ಬೆಂಗಳೂರು, ಅ10 : ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯನ್ನ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಗೆ ಬೀಗ ಹಾಕಿಕೊಂಡುಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀ ಅಂಗಡಿ ಮಾಲೀಕನನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಪ್ಪಲೇಔಟ್ ನಿವಾಸಿ ಸಂದೀಪ್ (31) ಎಂದು ಗುರುತಿಸಲಾಗಿದೆ. ಅ.8 ರಂದು ಕೊಡಿಗೇಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಶೀಲ ಎಂಬುವವರು ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ ಹಾಗೂ ಸುತ್ತ-ಮುತ್ತ ಗಣತಿ ಕಾರ್ಯ ಮಾಡುತ್ತಿದ್ದರು.
ಅದರಂತೆ ಅ.8ರಂದು ಗಣತಿಗಾಗಿ ಆರೋಪಿ ಸಂದೀಪ್ ಮನೆಗೆ ಕೂಡ ಹೋಗಿದ್ದಾರೆ. ಈ ವೇಳೆ ಸುಶೀಲ ಅವರು ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ನೀಡುವಂತೆ ಸಂದೀಪ್ ತಾಯಿಯ ಬಳಿ ಕೇಳಿದ್ದಾರೆ. ಅದರಂತೆ ಒಟಿಪಿ ಎಲ್ಲಾ ಪಡೆದ ಬಳಿಕ ಸಂದೀಪ್ ಮನೆಗೆ ಬಂದಿದ್ದಾನೆ.
ಈ ವೇಳೆ ಶಿಕ್ಷಕಿ ಸುಶೀಲ ಜತೆ ಸಮೀಕ್ಷೆ ಬಗ್ಗೆ ಪ್ರಶ್ನಿಸಿದ್ದಾನೆ. ಅಲ್ಲದೆ, ಸಮೀಕ್ಷೆ ಮಾಡಲು ಯಾರು ನಿಮಗೆ ಹೇಳಿದವರು, ಯಾಕೆ ದಾಖಲೆಗಳನ್ನು ಕೊಡಬೇಕು, ನೀವು ಸರ್ಕಾರಿ ಸಿಬ್ಬಂದಿ ಎಂದು ಹೇಗೆ ನಂಬಬೇಕು ಎಂದೆಲ್ಲ ಏರು ದ್ವನಿಯಲ್ಲಿ ಪ್ರಶ್ನಿಸಿದ್ದಾನೆ.
ಆಗ ಸುಶೀಲ ಅವರು ತಮ್ಮ ಗುರುತಿನ ಚೀಟಿಯನ್ನು ತೋರಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಸಂದೀಪ್ ಶಿಕ್ಷಕಿಯ ಜೊತೆ ಗಲಾಟೆ ಮಾಡಿದ್ದಾನೆ, ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಜೊತೆಗೆ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಬೀಗ ಹಾಕಿ, ನಿಮ್ಮ ಕಂಪನಿಯವರನ್ನು ಕರೆಯಿಸುವಂತೆ ಹೇಳಿ ಅಲ್ಲಿಂದ ಹೋಗಿದ್ದಾನೆ.
ಇತ್ತ ಎಷ್ಟೇ ಮನವಿ ಮಾಡಿದರೂ ಕೇಳದಿದ್ದಾಗ ಸುಶೀಲ 112 ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಪೊಲೀಸರು ಶಿಕ್ಷಕಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿ ಸಂದೀಪ್ ನನ್ನು ಸ್ಥಳಕ್ಕೆ ಕರೆಸಿಕೊಂಡು, ಅಲ್ಲಿಂದಲೇ ನೇರವಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಸದ್ಯ ಶಿಕ್ಷಕಿ ಸುಶೀಲ ಅವರು ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನ್ಯಾಯಾಲಯದ ಸೂಚನೆಯ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A shocking incident occurred in Bhadrappa Layout, Kodigehalli, where a government school teacher conducting the caste census survey was allegedly locked inside a house compound and verbally abused by a local resident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm