ಬ್ರೇಕಿಂಗ್ ನ್ಯೂಸ್
10-10-25 07:43 pm Bangalore Correspondent ಕ್ರೈಂ
ಬೆಂಗಳೂರು, ಅ10 : ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯನ್ನ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಗೆ ಬೀಗ ಹಾಕಿಕೊಂಡುಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀ ಅಂಗಡಿ ಮಾಲೀಕನನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಪ್ಪಲೇಔಟ್ ನಿವಾಸಿ ಸಂದೀಪ್ (31) ಎಂದು ಗುರುತಿಸಲಾಗಿದೆ. ಅ.8 ರಂದು ಕೊಡಿಗೇಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಶೀಲ ಎಂಬುವವರು ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ ಹಾಗೂ ಸುತ್ತ-ಮುತ್ತ ಗಣತಿ ಕಾರ್ಯ ಮಾಡುತ್ತಿದ್ದರು.
ಅದರಂತೆ ಅ.8ರಂದು ಗಣತಿಗಾಗಿ ಆರೋಪಿ ಸಂದೀಪ್ ಮನೆಗೆ ಕೂಡ ಹೋಗಿದ್ದಾರೆ. ಈ ವೇಳೆ ಸುಶೀಲ ಅವರು ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ನೀಡುವಂತೆ ಸಂದೀಪ್ ತಾಯಿಯ ಬಳಿ ಕೇಳಿದ್ದಾರೆ. ಅದರಂತೆ ಒಟಿಪಿ ಎಲ್ಲಾ ಪಡೆದ ಬಳಿಕ ಸಂದೀಪ್ ಮನೆಗೆ ಬಂದಿದ್ದಾನೆ.
ಈ ವೇಳೆ ಶಿಕ್ಷಕಿ ಸುಶೀಲ ಜತೆ ಸಮೀಕ್ಷೆ ಬಗ್ಗೆ ಪ್ರಶ್ನಿಸಿದ್ದಾನೆ. ಅಲ್ಲದೆ, ಸಮೀಕ್ಷೆ ಮಾಡಲು ಯಾರು ನಿಮಗೆ ಹೇಳಿದವರು, ಯಾಕೆ ದಾಖಲೆಗಳನ್ನು ಕೊಡಬೇಕು, ನೀವು ಸರ್ಕಾರಿ ಸಿಬ್ಬಂದಿ ಎಂದು ಹೇಗೆ ನಂಬಬೇಕು ಎಂದೆಲ್ಲ ಏರು ದ್ವನಿಯಲ್ಲಿ ಪ್ರಶ್ನಿಸಿದ್ದಾನೆ.
ಆಗ ಸುಶೀಲ ಅವರು ತಮ್ಮ ಗುರುತಿನ ಚೀಟಿಯನ್ನು ತೋರಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಸಂದೀಪ್ ಶಿಕ್ಷಕಿಯ ಜೊತೆ ಗಲಾಟೆ ಮಾಡಿದ್ದಾನೆ, ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಜೊತೆಗೆ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಬೀಗ ಹಾಕಿ, ನಿಮ್ಮ ಕಂಪನಿಯವರನ್ನು ಕರೆಯಿಸುವಂತೆ ಹೇಳಿ ಅಲ್ಲಿಂದ ಹೋಗಿದ್ದಾನೆ.
ಇತ್ತ ಎಷ್ಟೇ ಮನವಿ ಮಾಡಿದರೂ ಕೇಳದಿದ್ದಾಗ ಸುಶೀಲ 112 ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಪೊಲೀಸರು ಶಿಕ್ಷಕಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿ ಸಂದೀಪ್ ನನ್ನು ಸ್ಥಳಕ್ಕೆ ಕರೆಸಿಕೊಂಡು, ಅಲ್ಲಿಂದಲೇ ನೇರವಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಸದ್ಯ ಶಿಕ್ಷಕಿ ಸುಶೀಲ ಅವರು ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನ್ಯಾಯಾಲಯದ ಸೂಚನೆಯ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A shocking incident occurred in Bhadrappa Layout, Kodigehalli, where a government school teacher conducting the caste census survey was allegedly locked inside a house compound and verbally abused by a local resident.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm