ಬ್ರೇಕಿಂಗ್ ನ್ಯೂಸ್
14-10-25 04:44 pm HK News Desk ಕ್ರೈಂ
ದಾವಣಗೆರೆ, ಅ.14 : ಅಕ್ರಮವಾಗಿ ಅಮಲು ಬರುವ ಸಿರಪ್ ಗಳನ್ನು ಮಾರಾಟ ಮಾಡುವ ದಂಧೆಯನ್ನು ಪತ್ತೆ ಮಾಡಿದ ದಾವಣಗೆರೆ ಪೊಲೀಸರು ಐವರನ್ನು ಬಂಧಿಸಿದ್ದು ಅವರಿಂದ 1.24 ಲಕ್ಷ ರೂ. ಮೌಲ್ಯದ ಸಿರಪ್ ಹಾಗೂ ಬೈಕ್ ವಶಪಡಿಸಿದ್ದಾರೆ.
ದಾವಣಗೆರೆ ಎಸ್ಪಿ ಕಚೇರಿಯ ಮಾದಕ ದ್ರವ್ಯ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ದಾವಣಗೆರೆ ನಗರದ ದೇವರಾಜ ಅರಸ್ ಬಡಾವಣೆ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಸಿರಪ್ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದು ದಾಳಿ ನಡೆಸಿದೆ. ವೈದ್ಯರ ಸಲಹೆ ಇಲ್ಲದೇ ಅಕ್ರಮವಾಗಿ ಅಮಲು ಬರುವ ಸಿರಪ್ ಬಾಟಲ್ ಗಳನ್ನು ಮಾರಾಟ ಮಾಡುತ್ತಿದ್ದರು.

ಆರೋಪಿಗಳು ಯುವ ಸಮೂಹಕ್ಕೆ ಹಾಗೂ ವ್ಯಸನಿಗಳಿಗೆ ಸಿರಪ್ ಮಾರಾಟ ಮಾಡುತ್ತಿದ್ದರು. ದಾವಣಗೆರೆ ನಗರದ ಶಿವಕುಮಾರ (38), ಮಹಬೂಬ್ ನಗರದ ಅಜಿಮುದ್ದೀನ್(37), ದೇವರಾಜ್ ಅರಸ ಬಡಾವಣೆಯ ಮಹಮದ್ ಶಾರೀಕ್(35), ಚನ್ನಗಿರಿ ತಾಲೂಕಿನ ಹೊನ್ನೆಬಾಗಿಯ ಸೈಯದ್ ಬಾಬು ಅಲಿಯಾಸ್ ಯೂನುಸ್ (38), ಚನ್ನಗಿರಿ ಟೌನ್ ನಿವಾಸಿ ಅಬ್ದುಲ್ ಗಫರ್ (48) ಬಂಧಿತ ಆರೋಪಿಗಳು.
ಆರೋಪಿಗಳಿಂದ 100 ಎಂ.ಎಲ್ ನ ಒಟ್ಟು 340 Broncof-C cough Syrup ಬಾಟಲ್ಗಳು, 100 ಎಂ.ಎಲ್ ನ 15 EDEX-CT cough Syrup ಬಾಟಲ್ಗಳು, 20 ಸಣ್ಣ ಬಾಕ್ಸ್ ಗಳಲ್ಲಿರುವ aceclofenac Paracetamol & serratiopeptidase tablets ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಬಳಸುತ್ತಿದ್ದ ಒಂದು ಹೊಂಡಾ ಆಕ್ಟಿವಾ ಬೈಕು ಹಾಗೂ 1200 ನಗದು ವಶಕ್ಕೆ ತೆಗೆಯಲಾಗಿದೆ. ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Police in Davangere busted an illegal drug racket selling cough syrups with intoxicating effects to young people and addicts. The Narcotics Control Unit, under the SP’s office, arrested five individuals and seized cough syrup bottles worth ₹1.24 lakh along with a bike and cash.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm