ಬ್ರೇಕಿಂಗ್ ನ್ಯೂಸ್
28-12-20 01:03 pm Headline Karnataka News Network ಕ್ರೈಂ
ನವದೆಹಲಿ, ಡಿ.28: ಮಹಿಳೆಯೊಬ್ಬಳು ಐದು ತಿಂಗಳ ಮಗುವನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಗುಡ್ಡಿಸಿಂಗ್ ಗೊಂಡ್(27) ಜಿಲ್ಲೆಯ ಸುಖರ್ ಗ್ರಾಮದ ನಿವಾಸಿಯಾಗಿದ್ದಾರೆ. ಆಕೆ ತಾನು ಹೆತ್ತ ಗಂಡು ಮಗುವನ್ನು ತನ್ನ ಕೈಯಾರೆ ಬೆಂಕಿ ಹಚ್ಚಿ ಕೊಂದಿದ್ದಾಳೆ.
ಈ ವಿಚಾರವಾಗಿ ತನಿಖೆ ನಡೆಸಿದ ಚಿತ್ರಂಗಿ ಪೊಲೀಸ್ ಠಾಣೆಯ ಪೊಲೀಸರು ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ಆಕೆ ತನ್ನ ಮಗುವಿಗೆ ಯಾವಾಗ ಬೆಂಕಿ ಹಚ್ಚಿದ್ದಾಳೆ ಎಂಬ ಅರಿವೇ ಇರಲಿಲ್ಲ. ಮತ್ತು ಮಹಿಳೆ ತನ್ನ ಅಪರಾಧವನ್ನು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತಂತೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದ ಆಕೆಯ ಅತ್ತೆ, ಮನೆಯಲ್ಲಿ ಮಗು ತುಂಬಾ ಅಳುತ್ತಿತ್ತು ಎಂದು ಗುಡ್ಡಿ ತನ್ನ ಮೊಮ್ಮಗನಿಗೆ ಬೆಂಕಿ ಹಚ್ಚಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆರೋಪಿ ಗುಡ್ಡಿಗೆ ಮೂವರು ಪುತ್ರಿಯರಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವಿಚಿತ್ರವಾಗಿ ವರ್ತಿಸಲು ಆರಂಭಿಸಿದಳು. ಬಳಿಕ ಈಗ ಮಗುವನ್ನು ಬೆಂಕಿ ಹಚ್ಚಿ ಕೊಂದಿದ್ದಾಳೆ. ಆಕೆಗೆ ಮಾಂತ್ರಿಕ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಪೊಲೀಸರಿಗೆ ತನಿಖೆಯಲ್ಲಿ ತಿಳಿದುಬಂದಿದೆ.
ಗುಡ್ಡಿಯು ಅತೀಂದ್ರಿಯ ಅಭ್ಯಾಸದಿಂದಾಗಿ ತನ್ನ ಮಗುವನ್ನು ಕೊಂದಿದ್ದಾಳೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆದ್ರೆ ಈ ಪ್ರಕರಣದಲ್ಲಿ ಮಾಂತ್ರಿಕನು ಭಾಗಿಯಾಗಿದ್ದಾನೆಯೇ ಮತ್ತು ಆಕೆ ಅತೀಂದ್ರಿಯ ಅಭ್ಯಾಸದಿಂದ ಮಗುವನ್ನು ಆಕೆಯೇ ಕೊಂದಿದ್ದಾಳಾ..? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
An A27-year-old woman has been arrested for allegedly killing her five-month-old baby boy at Singrauli district in Madhya Pradesh.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm