ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm