ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am