ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm