ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm