ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am