ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm