ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am