ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
14-03-26 06:07 pm
HK News Staffer
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm