ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm