ಬ್ರೇಕಿಂಗ್ ನ್ಯೂಸ್
18-10-25 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಅ.18: ಇಲ್ಲಿನ ಸಂತೆಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲೂ ನಕಲಿ ಚಿನ್ನಾಭರಣ ಅಡವಿಟ್ಟು ವಂಚಿಸಿದ ಘಟನೆ ನಡೆದಿದೆ. ಅಬ್ದುಲ್ ರಮೀಜ್ ಎಂಬಾತ ರೂ. 4,75,750 ಸಾಲ ಪಡೆದು ವಂಚಿಸಿರುವ ಬಗ್ಗೆ ಸಂಘದ ವ್ಯವಸ್ಥಾಪಕ ಪ್ರವೀಣ್ ಕ್ಲಿಫರ್ಡ್ ಪಾಯಸ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲಿ ನಕಲಿ ಚಿನ್ನದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಸಂಘದ ವ್ಯವಸ್ಥಾಪಕ ಪ್ರವೀಣ್ ಕ್ಲಿಪರ್ಡ್ ಪಾಯಸ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಅಬ್ದುಲ್ ರಮೀಜ್ ಎಂಬಾತ 2025 ಸೆಪ್ಟೆಂಬರ್ ತಿಂಗಳ 9 ರಂದು ಮತ್ತು ಅಕ್ಟೋಬರ್ ತಿಂಗಳ 8 ರಂದು ಸಹಕಾರ ಸಂಘಕ್ಕೆ ಬಂದು ಕ್ರಮವಾಗಿ 22.900 ಗ್ರಾಂ ಮತ್ತು 33.910 ಗ್ರಾಂ ತೂಕದ ಚಿನ್ನಾಭರಣವೆಂದು ನಂಬಿಸಿ ಚಿನ್ನವನ್ನು ಅಡವಿಟ್ಟು, ಕ್ರಮವಾಗಿ ರೂ. 1,91,000 ರೂ ಮತ್ತು ರೂ. 2,84,750 ರೂ. ಸಾಲ ಪಡೆದಿದ್ದಾನೆ. ಅ.14 ರಂದು ಸಾಮಾಜಿಕ ಜಾಲತಾಣದಲ್ಲಿ ಆರೋಪಿ ಅಬ್ದುಲ್ ರಮೀಜ್ ಮಂಗಳೂರಿನ ಇತರೇ ಸಹಕಾರಿ ಸಂಸ್ಥೆಗಳಲ್ಲಿ ನಕಲಿ ಚಿನ್ನಾಭರಣ ಅಡವಿರಿಸಿ ಸಾಲ ಪಡೆದು ಮೋಸ ಮಾಡಿರುವ ವಿಚಾರ ತಿಳಿದುಬಂದಿತ್ತು.
ಇದರಿಂದ ಸಂಶಯಗೊಂಡು ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಆರೋಪಿ ಇಟ್ಟಿದ್ದ ಚಿನ್ನವನ್ನು ಪರಿಶೀಲಿಸಿದಾಗ ನಕಲಿ ಎಂಬುದು ಪತ್ತೆಯಾಗಿತ್ತು. ಒಟ್ಟು 56.810 ಗ್ರಾಂ ತೂಕದ ನಕಲಿ ಚಿನ್ನಾಭರ ಇಟ್ಟಿದ್ದು ರೂ.4,75,750 ಸಾಲ ಪಡೆದಿದ್ದಾನೆ. ಬ್ಯಾಂಕ್ ವ್ಯವಸ್ಥಾಪಕರ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಂಗಳೂರು ಕಾವೂರಿನ ಆತ್ಮಶಕ್ತಿ ಸಹಕಾರಿ ಸಂಘ ಮತ್ತು ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘದ ಪುತ್ತೂರು ಶಾಖೆಯಲ್ಲಿ ಇದೇ ಅಬ್ದುಲ್ ರಮೀಜ್ ನಕಲಿ ಚಿನ್ನ ಇಟ್ಟು ದೊಡ್ಡ ಮೊತ್ತದ ಸಾಲ ಪಡೆದು ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
The Belthangady branch of Ujire Anugraha Multipurpose Co-operative Society has become the latest victim of a fake gold loan scam involving Abdul Rameez of Puttur. The accused allegedly pledged fake gold ornaments weighing 56.810 grams and obtained a loan of ₹4,75,750 from the society.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am