ಬ್ರೇಕಿಂಗ್ ನ್ಯೂಸ್
18-10-25 03:48 pm Mangalore Correspondent ಕ್ರೈಂ
ಪುತ್ತೂರು, ಅ.18: ಪುತ್ತೂರಿನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ಇಬ್ಬರು ಟ್ರಾಫಿಕ್ ಪೊಲೀಸರು ಹಲ್ಲೆ ನಡೆಸಿದ ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಸಂಬಂಧಿಸಿ ಪರಿಶೀಲನೆ ಬಳಿಕ ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್, ಹಲ್ಲೆ ನಡೆಸಿರುವ ಎಎಸ್ಐ ಮತ್ತು ಪೊಲೀಸ್ ಪೇದೆಯನ್ನು ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಪುತ್ತೂರಿನ ದರ್ಬೆಯಲ್ಲಿ ಆಟೋ ಚಾಲಕ ಬಶೀರ್ ಎಂಬಾತ ಸಮವಸ್ತ್ರ ಧರಿಸದೇ ಆಟೋ ಚಲಾಯಿಸಿಕೊಂಡು ತೆರಳುತ್ತಿದ್ದಾಗ ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರಿ ಠಾಣೆಯ ಎಎಸ್ಐ ಚಿದಾನಂದ ರೈ ಮತ್ತು ಪೇದೆ ಶ್ರೀಶೈಲ ಎಂ.ಕೆ ಅವರು ನಿಲ್ಲಿಸಲು ಸೂಚಿಸಿದ್ದಾರೆ. ನಿಲ್ಲಿಸದೇ ಇದ್ದಾಗ ಟ್ರಾಫಿಕ್ ಪೊಲೀಸರು ಬೈಕಿನಲ್ಲಿ ಹಿಂಬಾಲಿಸಿ ಅಡ್ಡಗಟ್ಟಿದ್ದು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.



ಬೈಕಿನಲ್ಲಿ ಅಡ್ಡಗಟ್ಟುವುದು ಮತ್ತು ಹಲ್ಲೆ ನಡೆಸಿದ ಘಟನೆಯನ್ನು ಸ್ವತಃ ಬಶೀರ್ ತನ್ನ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರಿಂದ ವೈರಲ್ ಆಗಿತ್ತು. ವಿಡಿಯೋ ಆಧರಿಸಿ ಜಿಲ್ಲಾ ಎಸ್ಪಿಯವರು ಕರ್ತವ್ಯ ಲೋಪ ಎಸಗಿದ ಎಎಸ್ಐ ಮತ್ತು ಪೊಲೀಸ್ ಪೇದೆಯನ್ನು ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.
ಬಶೀರ್ ಹೇಳಿಕೆಯ ಪ್ರಕಾರ, ಫಿಲೋಮಿನಾ ಕಾಲೇಜು ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ದಿನವೂ ವಾಹನಗಳನ್ನು ಅಡ್ಡಗಟ್ಟಿ ದಂಡ ವಿಧಿಸುತ್ತಾರೆ. ನಿನ್ನೆ ಆಟೋ ನಿಲ್ಲಿಸದೇ ಇದ್ದಾಗ ಇಬ್ಬರು ಪೊಲೀಸರು ಹಿಂಬಾಲಿಸಿ ಬಂದು ಅಡ್ಡಗಟ್ಟಿದ್ದಾರೆ. ವಿಡಿಯೋ ಮಾಡಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ. ಘಟನೆ ಸಂಬಂಧಿಸಿ ಸಮವಸ್ತ್ರ ಧರಿಸದಿರುವುದು ಮತ್ತು ಪೊಲೀಸರ ಸೂಚನೆ ಪಾಲಿಸದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬಶೀರ್ ವಿರುದ್ಧವೂ ಪ್ರಕರಣ ದಾಖಲಾಗಿದೆ.
Auto driver assaulted by two traffic cops after being stopped for not wearing uniform; video goes viral. SP Dr. Arun suspends ASI Chidananda Rai & constable Shreeshail M.K. for dereliction of duty. A case also filed against driver Basheer for non-compliance. #Puttur #mangalore pic.twitter.com/Yw7GUNznvc
— Headline Karnataka (@hknewsonline) October 18, 2025
A shocking incident from Puttur has gone viral after a video surfaced showing two traffic policemen assaulting an auto driver. Following an internal inquiry, Dakshina Kannada SP Dr. Arun has suspended Traffic ASI Chidananda Rai and Constable Shreeshaila M.K. for misconduct.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm