ಬ್ರೇಕಿಂಗ್ ನ್ಯೂಸ್
21-10-25 10:51 pm Mangalore Correspondent ಕ್ರೈಂ
ಮಂಗಳೂರು, ಅ.21 : ನಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ಡಬಲ್ ಆಗುತ್ತೆ, ದೊಡ್ಡ ಮಟ್ಟದ ಲಾಭ ಸಿಗುತ್ತದೆ ಎಂದು ನಂಬಿಸಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಮುಲ್ಕಿ ಪೊಲೀಸರು ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ.
ಕವತ್ತಾರು ನಿವಾಸಿಗಳಾದ ರಿಚರ್ಡ್ ಡಿಸೋಜ (52) ಮತ್ತು ಆತನ ಪತ್ನಿ ರಶ್ಮಿ ರೀಟಾ ಪಿಂಟೋ (47) ಬಂಧಿತರು. ಇನ್ವೆಸ್ಟ್ ಮೆಂಟ್ ಸ್ಕೀಮ್ ಹೆಸರಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಮತ್ತು ಒಡವೆಯನ್ನು ಪಡೆದು ವಂಚಿಸಿರುವ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ಕಂಪನಿ ಹೆಸರಲ್ಲಿ ಇವರು ಜನರನ್ನು ಇನ್ವೆಸ್ಟ್ ಮಾಡುವಂತೆ ಪ್ರೇರೇಪಣೆ ಮಾಡುತ್ತಿದ್ದರು.
ಹಣ ವಂಚನೆ ಮಾಡಿದ ಬಗ್ಗೆ ದಂಪತಿ ವಿರುದ್ಧ 2024ರಲ್ಲಿ ಮತ್ತು 2025ರಲ್ಲಿ ಎರಡು ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಆರೋಪಿ ದಂಪತಿ ಮುಂಬೈಗೆ ಎಸ್ಕೇಪ್ ಆಗಿ ತಲೆಮರೆಸಿಕೊಂಡಿದ್ದರು. ಮುಲ್ಕಿ ಪೊಲೀಸರು ಬೆನ್ನು ಹತ್ತಿ ಇಬ್ಬರನ್ನೂ ಮುಂಬೈನಲ್ಲಿ ಅರೆಸ್ಟ್ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ರಿಚರ್ಡ್ ಡಿಸೋಜಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವಂಚನೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದಂಪತಿಯಿಂದ ಮೋಸಕ್ಕೊಳಗಾದವರು ಇದ್ದರೆ ಬಂದು ದೂರು ನೀಡಿ ಸಾಕ್ಷ್ಯಗಳನ್ನು ನೀಡಬಹುದು ಎಂದು ಮುಲ್ಕಿ ಪೊಲೀಸರು ತಿಳಿಸಿದ್ದಾರೆ.
Mulki police have arrested a couple, Richard D’Souza (52) and his wife Rashmi Rita Pinto (47), for allegedly running a fake investment scheme that duped several people of crores of rupees and gold ornaments. The couple had promised to double investors’ money through a bogus company.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm