ಬ್ರೇಕಿಂಗ್ ನ್ಯೂಸ್
22-10-25 11:51 am Mangalore Correspondent ಕ್ರೈಂ
ಪುತ್ತೂರು, ಅ.22 : ಅಕ್ರಮವಾಗಿ ಹತ್ತು ಜಾನುವಾರುಗಳನ್ನು ಸಾಗಿಸುತ್ತಿದ್ದ ಈಚರ್ ಟೆಂಪೋವನ್ನು ಪೊಲೀಸರು ಬೆನ್ನಟ್ಟಿದ್ದು ಈ ವೇಳೆ ಪೊಲೀಸ್ ಜೀಪಿಗೆ ಡಿಕ್ಕಿಯಾಗಿಸಲು ಯತ್ನಿಸಿದ ಘಟನೆ ನಡೆದಿದ್ದು ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ಐ ಒಬ್ಬನಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಕೇರಳ ಗಡಿಭಾಗ ಈಶ್ವರಮಂಗಲದ ಬೆಳ್ಳಿಚಡವು ಎಂಬಲ್ಲಿ ನಸುಕಿನ ವೇಳೆಗೆ ಘಟನೆ ನಡೆದಿದೆ. ಜಾನುವಾರುಗಳನ್ನು ಈಚರ್ ಲಾರಿಯಲ್ಲಿ ತುಂಬಿಕೊಂಡು ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು ಹತ್ತು ಕಿಮೀ ಉದ್ದಕ್ಕೆ ಪೊಲೀಸರು ಬೆನ್ನಟ್ಟಿದ್ದು ಈ ವೇಳೆ ಜೀಪಿಗೆ ಡಿಕ್ಕಿಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಬೆಳ್ಳಿಚಡವು ಒಳರಸ್ತೆಯ ಮೂಲಕ ಕೇರಳಕ್ಕೆ ಸಾಗುತ್ತಿದ್ದಾಗ ಪೊಲೀಸರು ಅಡ್ಡಹಾಕಿದ್ದಾರೆ.




ವಾಹನ ನಿಲ್ಲಿಸಲು ಸೂಚಿಸಿದ ಪೊಲೀಸರ ಮೇಲೆ ಲಾರಿ ಹತ್ತಿಸಲು ಯತ್ನಿಸಿದ್ದಾರೆ. ಅಲ್ಲದೆ, ವಾಹನ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾರೆ. ಬೆಳ್ಳಿಚಡವು ಬಳಿ ಲಾರಿ ಬಿಟ್ಟು ಒಬ್ಬಾತ ಓಡಿದ್ದು ಈ ವೇಳೆ ಪಿಎಸ್ಐ ಜಂಬುರಾಜ್ ಮಹಾಜನ್ ತನ್ನ ಪಿಸ್ತೂಲಿನಿಂದ ಫೈರ್ ಮಾಡಿದ್ದಾರೆ. ಒಂದು ಗುಂಡು ಈಚರ್ ಲಾರಿ ಮೇಲೆ ಬಿದ್ದಿದ್ದು, ಇನ್ನೊಂದು ಗುಂಡು ಲಾರಿ ಚಲಾಯಿಸುತ್ತಿದ್ದ ಅಬ್ದುಲ್ಲಾ (40) ಎಂಬಾತನ ಕಾಲಿಗೆ ಬಿದ್ದಿದೆ. ಈ ವೇಳೆ, ಲಾರಿ ನಿಲ್ಲುತ್ತಲೇ ಇನ್ನೊಬ್ಬ ಆರೋಪಿ ಇಳಿದು ಪರಾರಿಯಾಗಿದ್ದು ಗಾಯಾಳು ಚಾಲಕನನ್ನು ಬಂಧಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತರಲಾಗಿದೆ. ಆರೋಪಿ ಅಬ್ದುಲ್ಲಾ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಯಾಗಿದ್ದು ಅಕ್ರಮವಾಗಿ ನೋವುಗಳನ್ನು ಸುಳ್ಯ, ಪುತ್ತೂರು ಮೂಲಕ ಕೇರಳಕ್ಕೆ ಸಾಗಿಸುತ್ತಿದ್ದ.
ಗೋವುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಲಾರಿಯಲ್ಲಿದ್ದ 10 ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಬ್ದುಲ್ಲಾ ವಿರುದ್ಧ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
In a dramatic chase on the Karnataka–Kerala border near Ishwaramangala’s Bellichadavu, Puttur Rural Police intercepted an Eicher tempo illegally transporting ten cattle. When ordered to stop, the driver allegedly tried to ram the police jeep. PSI Jamburaj Mahajan fired two rounds — one bullet hit the vehicle, and another struck the driver, identified as Abdullah (40) from Kasaragod, in the leg.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am