ಬ್ರೇಕಿಂಗ್ ನ್ಯೂಸ್
22-10-25 11:51 am Mangalore Correspondent ಕ್ರೈಂ
ಪುತ್ತೂರು, ಅ.22 : ಅಕ್ರಮವಾಗಿ ಹತ್ತು ಜಾನುವಾರುಗಳನ್ನು ಸಾಗಿಸುತ್ತಿದ್ದ ಈಚರ್ ಟೆಂಪೋವನ್ನು ಪೊಲೀಸರು ಬೆನ್ನಟ್ಟಿದ್ದು ಈ ವೇಳೆ ಪೊಲೀಸ್ ಜೀಪಿಗೆ ಡಿಕ್ಕಿಯಾಗಿಸಲು ಯತ್ನಿಸಿದ ಘಟನೆ ನಡೆದಿದ್ದು ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ಐ ಒಬ್ಬನಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಕೇರಳ ಗಡಿಭಾಗ ಈಶ್ವರಮಂಗಲದ ಬೆಳ್ಳಿಚಡವು ಎಂಬಲ್ಲಿ ನಸುಕಿನ ವೇಳೆಗೆ ಘಟನೆ ನಡೆದಿದೆ. ಜಾನುವಾರುಗಳನ್ನು ಈಚರ್ ಲಾರಿಯಲ್ಲಿ ತುಂಬಿಕೊಂಡು ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು ಹತ್ತು ಕಿಮೀ ಉದ್ದಕ್ಕೆ ಪೊಲೀಸರು ಬೆನ್ನಟ್ಟಿದ್ದು ಈ ವೇಳೆ ಜೀಪಿಗೆ ಡಿಕ್ಕಿಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಬೆಳ್ಳಿಚಡವು ಒಳರಸ್ತೆಯ ಮೂಲಕ ಕೇರಳಕ್ಕೆ ಸಾಗುತ್ತಿದ್ದಾಗ ಪೊಲೀಸರು ಅಡ್ಡಹಾಕಿದ್ದಾರೆ.




ವಾಹನ ನಿಲ್ಲಿಸಲು ಸೂಚಿಸಿದ ಪೊಲೀಸರ ಮೇಲೆ ಲಾರಿ ಹತ್ತಿಸಲು ಯತ್ನಿಸಿದ್ದಾರೆ. ಅಲ್ಲದೆ, ವಾಹನ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾರೆ. ಬೆಳ್ಳಿಚಡವು ಬಳಿ ಲಾರಿ ಬಿಟ್ಟು ಒಬ್ಬಾತ ಓಡಿದ್ದು ಈ ವೇಳೆ ಪಿಎಸ್ಐ ಜಂಬುರಾಜ್ ಮಹಾಜನ್ ತನ್ನ ಪಿಸ್ತೂಲಿನಿಂದ ಫೈರ್ ಮಾಡಿದ್ದಾರೆ. ಒಂದು ಗುಂಡು ಈಚರ್ ಲಾರಿ ಮೇಲೆ ಬಿದ್ದಿದ್ದು, ಇನ್ನೊಂದು ಗುಂಡು ಲಾರಿ ಚಲಾಯಿಸುತ್ತಿದ್ದ ಅಬ್ದುಲ್ಲಾ (40) ಎಂಬಾತನ ಕಾಲಿಗೆ ಬಿದ್ದಿದೆ. ಈ ವೇಳೆ, ಲಾರಿ ನಿಲ್ಲುತ್ತಲೇ ಇನ್ನೊಬ್ಬ ಆರೋಪಿ ಇಳಿದು ಪರಾರಿಯಾಗಿದ್ದು ಗಾಯಾಳು ಚಾಲಕನನ್ನು ಬಂಧಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ತರಲಾಗಿದೆ. ಆರೋಪಿ ಅಬ್ದುಲ್ಲಾ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಯಾಗಿದ್ದು ಅಕ್ರಮವಾಗಿ ನೋವುಗಳನ್ನು ಸುಳ್ಯ, ಪುತ್ತೂರು ಮೂಲಕ ಕೇರಳಕ್ಕೆ ಸಾಗಿಸುತ್ತಿದ್ದ.
ಗೋವುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಲಾರಿಯಲ್ಲಿದ್ದ 10 ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಬ್ದುಲ್ಲಾ ವಿರುದ್ಧ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 33/2025 ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
In a dramatic chase on the Karnataka–Kerala border near Ishwaramangala’s Bellichadavu, Puttur Rural Police intercepted an Eicher tempo illegally transporting ten cattle. When ordered to stop, the driver allegedly tried to ram the police jeep. PSI Jamburaj Mahajan fired two rounds — one bullet hit the vehicle, and another struck the driver, identified as Abdullah (40) from Kasaragod, in the leg.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm