ಬ್ರೇಕಿಂಗ್ ನ್ಯೂಸ್
23-10-25 05:20 pm Bangalore Correspondent ಕ್ರೈಂ
ಬೆಂಗಳೂರು, ಅ 23 : ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ. ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದಾರೆ.
ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ನಂತರ ಮದುವೆಯಾಗುವುದಾಗಿ ನಂಬಿಸಿದ್ದಾರೆ. ಅಷ್ಟೇ ಅಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನನಗೆ ಮನೆ ಕೊಡಿಸುತ್ತೇನೆ. ಬ್ಯೂಟಿ ಪಾರ್ಲರ್ ಓಪನ್ ಮಾಡಿಕೊಡುತ್ತೇನೆ ಎಂದು ಹೇಳಿ ನನ್ನನ್ನು ತಮ್ಮ ಮನೆ ಮತ್ತು ಹೋಟೆಲ್ ಗೆ ಕರೆಸಿಕೊಂಡು ಮೂರು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆಯೇಷಾ ದೂರು ನೀಡಿದ್ದಾರೆ.


ಈ ಮಧ್ಯೆ, ಆರೋಪರಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂಡಿದ್ದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ. ಇನ್ಸ್ಪೆಕ್ಟರ್ ಸುನೀಲ್ ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಸಂತ್ರಸ್ತೆಯ ದೂರಿನ ಸತ್ಯಾಂಶಗಳನ್ನು ಈ ಚಾಟ್ಗಳು ಬಿಚ್ಚಿಟ್ಟಿವೆ.
ಇನ್ನು ಖಾಸಗಿ ಪೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ನಡೆಸಿರುವ ಆರೋಪವನ್ನು ಮಹಿಳೆ ಮಾಡಿದ್ದಾರೆ. ನಮ್ಮ ವಿಚಾರವನ್ನು ಯಾರಿಗಾದರೂ ಹೇಳಿದರೇ ಕೊಲೆ ಮಾಡೋದಾಗಿ ಬೆದರಿಕೆ ಕೂಡ ಹಾಕಿದ್ದಾರಂತೆ. ಪ್ರತಿ ಭಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಿದ್ದಾರೆ ಎಂದು ಸಂತ್ರಸ್ಥ ಮಹಿಳೆ ಆರೋಪ ಮಾಡಿದ್ದಾರೆ.
ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಂತ್ರಸ್ಥೆ ನಡುವೆ ವಾಟ್ಸಾಫ್ ಚಾಟಿಂಗ್ ಕೂಡ ನಡೆದಿದೆ. ತನ್ನ ಮನೆ ಲೊಕೇಷನ್ ಶೇರ್ ಮಾಡಿ ಮನೆಗೆ ಬರುವಂತೆ ಆಹ್ವಾನ…ಕೂಡ ನೀಡಿದ್ದಾರೆ. ಮನೆಯಲ್ಲಿ ಹೆಂಡತಿ , ಮಕ್ಕಳಿಲ್ಲ, ನನ್ನ ಮನೆಗೆ ಬಾ ಎಂದು ಇನ್ಸ್ ಪೆಕ್ಟರ್ ಮೆಸೇಜ್…ಮಾಡಿದ್ದಾರೆ. ಯು ಆರ್ ಲವ್ ಮೈ ಸ್ವೀಟ್ ಹಾರ್ಟ್ ಅಂಥ ಯುವತಿಯಿಂದಲೂ ಮೆಸೇಜ್ ಮಾಡಲಾಗಿದೆ. ಚಿನ್ನಿ, ಮಿಸ್ ಯೂ ಅಂಥ ಸಂತ್ರಸ್ಥೆಯಿಂದಲೂ ಮೆಸೇಜ್…ಮಾಡಲಾಗಿದೆ. ಅದಕ್ಕೆ ಮೀ ಟೂ ಅಂಥ ಇನ್ಸ್ ಪೆಕ್ಟರ್ ರಿಪ್ಲೈ ಮಾಡಿದ್ದಾರೆ. ವಿಡಿಯೋ ಕಾಲ್ ಮೂಲಕ ಇಬ್ಬರ ನಡುವೆ ಮಾತುಕತೆಯೂ ನಡೆದಿದೆ. ಇನ್ಸ್ ಪೆಕ್ಟರ್ ಸುನೀಲ್ ಹಾಗೂ ಸಂತ್ರಸ್ಥ ಮಹಿಳೆಯ ನಡುವಿನ ವಾಟ್ಸಾಫ್ ಚಾಟಿಂಗ್ ಅನ್ನು ಮಹಿಳೆ ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ.
A shocking case has emerged in Bengaluru, where DJ Halli Police Inspector Sunil has been accused of raping and cheating a 36-year-old woman who had come to the police station regarding a financial dispute.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm