ಬ್ರೇಕಿಂಗ್ ನ್ಯೂಸ್
23-10-25 05:20 pm Bangalore Correspondent ಕ್ರೈಂ
ಬೆಂಗಳೂರು, ಅ 23 : ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ. ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದಾರೆ.
ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ನಂತರ ಮದುವೆಯಾಗುವುದಾಗಿ ನಂಬಿಸಿದ್ದಾರೆ. ಅಷ್ಟೇ ಅಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನನಗೆ ಮನೆ ಕೊಡಿಸುತ್ತೇನೆ. ಬ್ಯೂಟಿ ಪಾರ್ಲರ್ ಓಪನ್ ಮಾಡಿಕೊಡುತ್ತೇನೆ ಎಂದು ಹೇಳಿ ನನ್ನನ್ನು ತಮ್ಮ ಮನೆ ಮತ್ತು ಹೋಟೆಲ್ ಗೆ ಕರೆಸಿಕೊಂಡು ಮೂರು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆಯೇಷಾ ದೂರು ನೀಡಿದ್ದಾರೆ.


ಈ ಮಧ್ಯೆ, ಆರೋಪರಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂಡಿದ್ದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ. ಇನ್ಸ್ಪೆಕ್ಟರ್ ಸುನೀಲ್ ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಸಂತ್ರಸ್ತೆಯ ದೂರಿನ ಸತ್ಯಾಂಶಗಳನ್ನು ಈ ಚಾಟ್ಗಳು ಬಿಚ್ಚಿಟ್ಟಿವೆ.
ಇನ್ನು ಖಾಸಗಿ ಪೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ನಡೆಸಿರುವ ಆರೋಪವನ್ನು ಮಹಿಳೆ ಮಾಡಿದ್ದಾರೆ. ನಮ್ಮ ವಿಚಾರವನ್ನು ಯಾರಿಗಾದರೂ ಹೇಳಿದರೇ ಕೊಲೆ ಮಾಡೋದಾಗಿ ಬೆದರಿಕೆ ಕೂಡ ಹಾಕಿದ್ದಾರಂತೆ. ಪ್ರತಿ ಭಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಿದ್ದಾರೆ ಎಂದು ಸಂತ್ರಸ್ಥ ಮಹಿಳೆ ಆರೋಪ ಮಾಡಿದ್ದಾರೆ.
ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಂತ್ರಸ್ಥೆ ನಡುವೆ ವಾಟ್ಸಾಫ್ ಚಾಟಿಂಗ್ ಕೂಡ ನಡೆದಿದೆ. ತನ್ನ ಮನೆ ಲೊಕೇಷನ್ ಶೇರ್ ಮಾಡಿ ಮನೆಗೆ ಬರುವಂತೆ ಆಹ್ವಾನ…ಕೂಡ ನೀಡಿದ್ದಾರೆ. ಮನೆಯಲ್ಲಿ ಹೆಂಡತಿ , ಮಕ್ಕಳಿಲ್ಲ, ನನ್ನ ಮನೆಗೆ ಬಾ ಎಂದು ಇನ್ಸ್ ಪೆಕ್ಟರ್ ಮೆಸೇಜ್…ಮಾಡಿದ್ದಾರೆ. ಯು ಆರ್ ಲವ್ ಮೈ ಸ್ವೀಟ್ ಹಾರ್ಟ್ ಅಂಥ ಯುವತಿಯಿಂದಲೂ ಮೆಸೇಜ್ ಮಾಡಲಾಗಿದೆ. ಚಿನ್ನಿ, ಮಿಸ್ ಯೂ ಅಂಥ ಸಂತ್ರಸ್ಥೆಯಿಂದಲೂ ಮೆಸೇಜ್…ಮಾಡಲಾಗಿದೆ. ಅದಕ್ಕೆ ಮೀ ಟೂ ಅಂಥ ಇನ್ಸ್ ಪೆಕ್ಟರ್ ರಿಪ್ಲೈ ಮಾಡಿದ್ದಾರೆ. ವಿಡಿಯೋ ಕಾಲ್ ಮೂಲಕ ಇಬ್ಬರ ನಡುವೆ ಮಾತುಕತೆಯೂ ನಡೆದಿದೆ. ಇನ್ಸ್ ಪೆಕ್ಟರ್ ಸುನೀಲ್ ಹಾಗೂ ಸಂತ್ರಸ್ಥ ಮಹಿಳೆಯ ನಡುವಿನ ವಾಟ್ಸಾಫ್ ಚಾಟಿಂಗ್ ಅನ್ನು ಮಹಿಳೆ ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ.
A shocking case has emerged in Bengaluru, where DJ Halli Police Inspector Sunil has been accused of raping and cheating a 36-year-old woman who had come to the police station regarding a financial dispute.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 01:42 pm
Udupi Correspondent
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
20-11-25 06:01 pm
Mangalore Correspondent
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm
Mangalore Sukhananda Shetty murder, Arrest: ಸ...
19-11-25 07:55 pm