ಬ್ರೇಕಿಂಗ್ ನ್ಯೂಸ್
23-10-25 06:53 pm Mangalore Correspondent ಕ್ರೈಂ
ಮಂಗಳೂರು, ಅ.23 : ಮಂಗಳೂರಿನ ಮಹಿಳೆಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು 42 ಲಕ್ಷ ಹಣವನ್ನು ಲಪಟಾಯಿಸಿದ ಘಟನೆ ನಡೆದಿದ್ದು ಹಣ ಕಳಕೊಂಡ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆಗೆ ಅಕ್ಟೋಬರ್ 7 ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ.
ಈ ವೇಳೆ ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಕಾರ್ಡನ್ನು ಪಡೆಯಲಾಗಿದ್ದು, ಅದರಲ್ಲಿ ಮೋಸದ ಕರೆಯನ್ನು ಮತ್ತು ಸಾರ್ವಜನಿಕರಿಗೆ ಸಂಶಯಾಸ್ಪದ ಲಿಂಕ್ ಗಳನ್ನು ಕಳಿಸುತ್ತಿದ್ದೀರಿ (Fraud calls & sending suspisious links to public) ಎಂದು ಹೇಳಿದ್ದು ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗಾಗಿ ವಿಚಾರಣೆಗಾಗಿ ಮುಂಬೈಗೆ ಬರುವಂತೆ ತಿಳಿಸಿದ್ದ.
ಮುಂಬೈಗೆ ಬರಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ, ವಂಚಕರು ಮಹಿಳೆಯಿಂದ ಸ್ವತಃ ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸ್ ಆಪ್ ಮಾಡಿದ್ದರು. ಬಳಿಕ ವಾಟ್ಸ್ ಆಪ್ ವಿಡಿಯೋ, ಆಡಿಯೋ ಕರೆ ಮಾಡಿ, ಸಿ.ಬಿ.ಐ ಐಪಿಎಸ್ ಆಫೀಸರ್, ಆರ್ ಬಿ ಐ ಮತ್ತು ಸುಪ್ರಿಂ ಕೋರ್ಟ್ ಜಡ್ಜ್ ಗೆ ಎಂದು ಹೇಳಿ ಸಂಪರ್ಕಿಸಿದ್ದಾರೆ. ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಇನ್ನಿತರ ವೈಯಕ್ತಿಕ ವಿವರಗಳನ್ನು ಕೇಳಿ ಪಡೆದಿದ್ದಾರೆ.
ಮರುದಿನ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ವಂಚಕರು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ಹೇಳಿ ಹಣ ಪಾವತಿಸಲು ತಿಳಿಸಿದ್ದಾರೆ. ಅಲ್ಲದೆ, ಎಲ್ಲ ಹಣವನ್ನು ಹಿಂತಿರುಗಿಸುತ್ತೇವೆ, ಈ ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಮಹಿಳೆಯನ್ನು ನಂಬಿಸಿದ್ದಾರೆ. ಮಹಿಳೆ ಭಯಗೊಂಡು ಯಾರಿಗೂ ವಿಷ ತಿಳಿಸಿರಲಿಲ್ಲ. ಆನಂತರ, 08-10-2025ರಿಂದ 17-10-2025ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 42,00,150/- ರೂ.ಗಳನ್ನು ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಇನ್ನೂ ಹೆಚ್ಚಿನ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದು ಇದರಿಂದ ಭಯಗೊಂಡು ತನ್ನ ಮಕ್ಕಳಿಗೆ ಹಾಗೂ ತಂಗಿಗೆ ವಿಚಾರ ತಿಳಿಸಿದಾಗ ಮೋಸ ಹೋಗಿರುವ ವಿಚಾರ ಗೊತ್ತಾಗಿತ್ತು.
A shocking case of cyber fraud has been reported from Mangaluru, where a woman lost ₹42 lakh after falling prey to a so-called “digital arrest” scam.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm