ಬ್ರೇಕಿಂಗ್ ನ್ಯೂಸ್
23-10-25 06:53 pm Mangalore Correspondent ಕ್ರೈಂ
ಮಂಗಳೂರು, ಅ.23 : ಮಂಗಳೂರಿನ ಮಹಿಳೆಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು 42 ಲಕ್ಷ ಹಣವನ್ನು ಲಪಟಾಯಿಸಿದ ಘಟನೆ ನಡೆದಿದ್ದು ಹಣ ಕಳಕೊಂಡ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆಗೆ ಅಕ್ಟೋಬರ್ 7 ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ.
ಈ ವೇಳೆ ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಕಾರ್ಡನ್ನು ಪಡೆಯಲಾಗಿದ್ದು, ಅದರಲ್ಲಿ ಮೋಸದ ಕರೆಯನ್ನು ಮತ್ತು ಸಾರ್ವಜನಿಕರಿಗೆ ಸಂಶಯಾಸ್ಪದ ಲಿಂಕ್ ಗಳನ್ನು ಕಳಿಸುತ್ತಿದ್ದೀರಿ (Fraud calls & sending suspisious links to public) ಎಂದು ಹೇಳಿದ್ದು ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗಾಗಿ ವಿಚಾರಣೆಗಾಗಿ ಮುಂಬೈಗೆ ಬರುವಂತೆ ತಿಳಿಸಿದ್ದ.
ಮುಂಬೈಗೆ ಬರಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ, ವಂಚಕರು ಮಹಿಳೆಯಿಂದ ಸ್ವತಃ ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸ್ ಆಪ್ ಮಾಡಿದ್ದರು. ಬಳಿಕ ವಾಟ್ಸ್ ಆಪ್ ವಿಡಿಯೋ, ಆಡಿಯೋ ಕರೆ ಮಾಡಿ, ಸಿ.ಬಿ.ಐ ಐಪಿಎಸ್ ಆಫೀಸರ್, ಆರ್ ಬಿ ಐ ಮತ್ತು ಸುಪ್ರಿಂ ಕೋರ್ಟ್ ಜಡ್ಜ್ ಗೆ ಎಂದು ಹೇಳಿ ಸಂಪರ್ಕಿಸಿದ್ದಾರೆ. ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಇನ್ನಿತರ ವೈಯಕ್ತಿಕ ವಿವರಗಳನ್ನು ಕೇಳಿ ಪಡೆದಿದ್ದಾರೆ.
ಮರುದಿನ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ವಂಚಕರು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ಹೇಳಿ ಹಣ ಪಾವತಿಸಲು ತಿಳಿಸಿದ್ದಾರೆ. ಅಲ್ಲದೆ, ಎಲ್ಲ ಹಣವನ್ನು ಹಿಂತಿರುಗಿಸುತ್ತೇವೆ, ಈ ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಮಹಿಳೆಯನ್ನು ನಂಬಿಸಿದ್ದಾರೆ. ಮಹಿಳೆ ಭಯಗೊಂಡು ಯಾರಿಗೂ ವಿಷ ತಿಳಿಸಿರಲಿಲ್ಲ. ಆನಂತರ, 08-10-2025ರಿಂದ 17-10-2025ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 42,00,150/- ರೂ.ಗಳನ್ನು ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಇನ್ನೂ ಹೆಚ್ಚಿನ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದು ಇದರಿಂದ ಭಯಗೊಂಡು ತನ್ನ ಮಕ್ಕಳಿಗೆ ಹಾಗೂ ತಂಗಿಗೆ ವಿಚಾರ ತಿಳಿಸಿದಾಗ ಮೋಸ ಹೋಗಿರುವ ವಿಚಾರ ಗೊತ್ತಾಗಿತ್ತು.
A shocking case of cyber fraud has been reported from Mangaluru, where a woman lost ₹42 lakh after falling prey to a so-called “digital arrest” scam.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 01:42 pm
Udupi Correspondent
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
20-11-25 06:01 pm
Mangalore Correspondent
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm
Mangalore Sukhananda Shetty murder, Arrest: ಸ...
19-11-25 07:55 pm