ಬ್ರೇಕಿಂಗ್ ನ್ಯೂಸ್
23-10-25 06:53 pm Mangalore Correspondent ಕ್ರೈಂ
ಮಂಗಳೂರು, ಅ.23 : ಮಂಗಳೂರಿನ ಮಹಿಳೆಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು 42 ಲಕ್ಷ ಹಣವನ್ನು ಲಪಟಾಯಿಸಿದ ಘಟನೆ ನಡೆದಿದ್ದು ಹಣ ಕಳಕೊಂಡ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆಗೆ ಅಕ್ಟೋಬರ್ 7 ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ.
ಈ ವೇಳೆ ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಕಾರ್ಡನ್ನು ಪಡೆಯಲಾಗಿದ್ದು, ಅದರಲ್ಲಿ ಮೋಸದ ಕರೆಯನ್ನು ಮತ್ತು ಸಾರ್ವಜನಿಕರಿಗೆ ಸಂಶಯಾಸ್ಪದ ಲಿಂಕ್ ಗಳನ್ನು ಕಳಿಸುತ್ತಿದ್ದೀರಿ (Fraud calls & sending suspisious links to public) ಎಂದು ಹೇಳಿದ್ದು ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗಾಗಿ ವಿಚಾರಣೆಗಾಗಿ ಮುಂಬೈಗೆ ಬರುವಂತೆ ತಿಳಿಸಿದ್ದ.
ಮುಂಬೈಗೆ ಬರಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ, ವಂಚಕರು ಮಹಿಳೆಯಿಂದ ಸ್ವತಃ ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸ್ ಆಪ್ ಮಾಡಿದ್ದರು. ಬಳಿಕ ವಾಟ್ಸ್ ಆಪ್ ವಿಡಿಯೋ, ಆಡಿಯೋ ಕರೆ ಮಾಡಿ, ಸಿ.ಬಿ.ಐ ಐಪಿಎಸ್ ಆಫೀಸರ್, ಆರ್ ಬಿ ಐ ಮತ್ತು ಸುಪ್ರಿಂ ಕೋರ್ಟ್ ಜಡ್ಜ್ ಗೆ ಎಂದು ಹೇಳಿ ಸಂಪರ್ಕಿಸಿದ್ದಾರೆ. ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಇನ್ನಿತರ ವೈಯಕ್ತಿಕ ವಿವರಗಳನ್ನು ಕೇಳಿ ಪಡೆದಿದ್ದಾರೆ.
ಮರುದಿನ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ವಂಚಕರು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ಹೇಳಿ ಹಣ ಪಾವತಿಸಲು ತಿಳಿಸಿದ್ದಾರೆ. ಅಲ್ಲದೆ, ಎಲ್ಲ ಹಣವನ್ನು ಹಿಂತಿರುಗಿಸುತ್ತೇವೆ, ಈ ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಮಹಿಳೆಯನ್ನು ನಂಬಿಸಿದ್ದಾರೆ. ಮಹಿಳೆ ಭಯಗೊಂಡು ಯಾರಿಗೂ ವಿಷ ತಿಳಿಸಿರಲಿಲ್ಲ. ಆನಂತರ, 08-10-2025ರಿಂದ 17-10-2025ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 42,00,150/- ರೂ.ಗಳನ್ನು ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಇನ್ನೂ ಹೆಚ್ಚಿನ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದು ಇದರಿಂದ ಭಯಗೊಂಡು ತನ್ನ ಮಕ್ಕಳಿಗೆ ಹಾಗೂ ತಂಗಿಗೆ ವಿಚಾರ ತಿಳಿಸಿದಾಗ ಮೋಸ ಹೋಗಿರುವ ವಿಚಾರ ಗೊತ್ತಾಗಿತ್ತು.
A shocking case of cyber fraud has been reported from Mangaluru, where a woman lost ₹42 lakh after falling prey to a so-called “digital arrest” scam.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm