ಬ್ರೇಕಿಂಗ್ ನ್ಯೂಸ್
23-10-25 06:53 pm Mangalore Correspondent ಕ್ರೈಂ
ಮಂಗಳೂರು, ಅ.23 : ಮಂಗಳೂರಿನ ಮಹಿಳೆಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು 42 ಲಕ್ಷ ಹಣವನ್ನು ಲಪಟಾಯಿಸಿದ ಘಟನೆ ನಡೆದಿದ್ದು ಹಣ ಕಳಕೊಂಡ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆಗೆ ಅಕ್ಟೋಬರ್ 7 ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ.
ಈ ವೇಳೆ ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಕಾರ್ಡನ್ನು ಪಡೆಯಲಾಗಿದ್ದು, ಅದರಲ್ಲಿ ಮೋಸದ ಕರೆಯನ್ನು ಮತ್ತು ಸಾರ್ವಜನಿಕರಿಗೆ ಸಂಶಯಾಸ್ಪದ ಲಿಂಕ್ ಗಳನ್ನು ಕಳಿಸುತ್ತಿದ್ದೀರಿ (Fraud calls & sending suspisious links to public) ಎಂದು ಹೇಳಿದ್ದು ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗಾಗಿ ವಿಚಾರಣೆಗಾಗಿ ಮುಂಬೈಗೆ ಬರುವಂತೆ ತಿಳಿಸಿದ್ದ.
ಮುಂಬೈಗೆ ಬರಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ, ವಂಚಕರು ಮಹಿಳೆಯಿಂದ ಸ್ವತಃ ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸ್ ಆಪ್ ಮಾಡಿದ್ದರು. ಬಳಿಕ ವಾಟ್ಸ್ ಆಪ್ ವಿಡಿಯೋ, ಆಡಿಯೋ ಕರೆ ಮಾಡಿ, ಸಿ.ಬಿ.ಐ ಐಪಿಎಸ್ ಆಫೀಸರ್, ಆರ್ ಬಿ ಐ ಮತ್ತು ಸುಪ್ರಿಂ ಕೋರ್ಟ್ ಜಡ್ಜ್ ಗೆ ಎಂದು ಹೇಳಿ ಸಂಪರ್ಕಿಸಿದ್ದಾರೆ. ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಇನ್ನಿತರ ವೈಯಕ್ತಿಕ ವಿವರಗಳನ್ನು ಕೇಳಿ ಪಡೆದಿದ್ದಾರೆ.
ಮರುದಿನ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ವಂಚಕರು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ಹೇಳಿ ಹಣ ಪಾವತಿಸಲು ತಿಳಿಸಿದ್ದಾರೆ. ಅಲ್ಲದೆ, ಎಲ್ಲ ಹಣವನ್ನು ಹಿಂತಿರುಗಿಸುತ್ತೇವೆ, ಈ ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಮಹಿಳೆಯನ್ನು ನಂಬಿಸಿದ್ದಾರೆ. ಮಹಿಳೆ ಭಯಗೊಂಡು ಯಾರಿಗೂ ವಿಷ ತಿಳಿಸಿರಲಿಲ್ಲ. ಆನಂತರ, 08-10-2025ರಿಂದ 17-10-2025ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 42,00,150/- ರೂ.ಗಳನ್ನು ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಇನ್ನೂ ಹೆಚ್ಚಿನ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದು ಇದರಿಂದ ಭಯಗೊಂಡು ತನ್ನ ಮಕ್ಕಳಿಗೆ ಹಾಗೂ ತಂಗಿಗೆ ವಿಚಾರ ತಿಳಿಸಿದಾಗ ಮೋಸ ಹೋಗಿರುವ ವಿಚಾರ ಗೊತ್ತಾಗಿತ್ತು.
A shocking case of cyber fraud has been reported from Mangaluru, where a woman lost ₹42 lakh after falling prey to a so-called “digital arrest” scam.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am