ಬ್ರೇಕಿಂಗ್ ನ್ಯೂಸ್
23-10-25 06:53 pm Mangalore Correspondent ಕ್ರೈಂ
ಮಂಗಳೂರು, ಅ.23 : ಮಂಗಳೂರಿನ ಮಹಿಳೆಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು 42 ಲಕ್ಷ ಹಣವನ್ನು ಲಪಟಾಯಿಸಿದ ಘಟನೆ ನಡೆದಿದ್ದು ಹಣ ಕಳಕೊಂಡ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆಗೆ ಅಕ್ಟೋಬರ್ 7 ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ.
ಈ ವೇಳೆ ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಕಾರ್ಡನ್ನು ಪಡೆಯಲಾಗಿದ್ದು, ಅದರಲ್ಲಿ ಮೋಸದ ಕರೆಯನ್ನು ಮತ್ತು ಸಾರ್ವಜನಿಕರಿಗೆ ಸಂಶಯಾಸ್ಪದ ಲಿಂಕ್ ಗಳನ್ನು ಕಳಿಸುತ್ತಿದ್ದೀರಿ (Fraud calls & sending suspisious links to public) ಎಂದು ಹೇಳಿದ್ದು ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗಾಗಿ ವಿಚಾರಣೆಗಾಗಿ ಮುಂಬೈಗೆ ಬರುವಂತೆ ತಿಳಿಸಿದ್ದ.
ಮುಂಬೈಗೆ ಬರಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ, ವಂಚಕರು ಮಹಿಳೆಯಿಂದ ಸ್ವತಃ ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸ್ ಆಪ್ ಮಾಡಿದ್ದರು. ಬಳಿಕ ವಾಟ್ಸ್ ಆಪ್ ವಿಡಿಯೋ, ಆಡಿಯೋ ಕರೆ ಮಾಡಿ, ಸಿ.ಬಿ.ಐ ಐಪಿಎಸ್ ಆಫೀಸರ್, ಆರ್ ಬಿ ಐ ಮತ್ತು ಸುಪ್ರಿಂ ಕೋರ್ಟ್ ಜಡ್ಜ್ ಗೆ ಎಂದು ಹೇಳಿ ಸಂಪರ್ಕಿಸಿದ್ದಾರೆ. ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಇನ್ನಿತರ ವೈಯಕ್ತಿಕ ವಿವರಗಳನ್ನು ಕೇಳಿ ಪಡೆದಿದ್ದಾರೆ.
ಮರುದಿನ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ವಂಚಕರು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ಹೇಳಿ ಹಣ ಪಾವತಿಸಲು ತಿಳಿಸಿದ್ದಾರೆ. ಅಲ್ಲದೆ, ಎಲ್ಲ ಹಣವನ್ನು ಹಿಂತಿರುಗಿಸುತ್ತೇವೆ, ಈ ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಮಹಿಳೆಯನ್ನು ನಂಬಿಸಿದ್ದಾರೆ. ಮಹಿಳೆ ಭಯಗೊಂಡು ಯಾರಿಗೂ ವಿಷ ತಿಳಿಸಿರಲಿಲ್ಲ. ಆನಂತರ, 08-10-2025ರಿಂದ 17-10-2025ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 42,00,150/- ರೂ.ಗಳನ್ನು ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಇನ್ನೂ ಹೆಚ್ಚಿನ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದು ಇದರಿಂದ ಭಯಗೊಂಡು ತನ್ನ ಮಕ್ಕಳಿಗೆ ಹಾಗೂ ತಂಗಿಗೆ ವಿಚಾರ ತಿಳಿಸಿದಾಗ ಮೋಸ ಹೋಗಿರುವ ವಿಚಾರ ಗೊತ್ತಾಗಿತ್ತು.
A shocking case of cyber fraud has been reported from Mangaluru, where a woman lost ₹42 lakh after falling prey to a so-called “digital arrest” scam.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm