ಬ್ರೇಕಿಂಗ್ ನ್ಯೂಸ್
24-10-25 10:07 am Mangalore Correspondent ಕ್ರೈಂ
ಮಂಗಳೂರು, ಅ.24 : ಸುರತ್ಕಲ್ ಪೇಟೆಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು ಮುಸ್ಲಿಂ ಯುವಕರಿಬ್ಬರಿಗೆ ಚೂರಿ ಇರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಾಟಿಪಳ್ಳ ಕೃಷ್ಣಾಪುರ ನಿವಾಸಿಗಳಾದ ಮುಕ್ಷಿದ್ (28) ಮತ್ತು ನಿಜಾಮ್ (24) ಇರಿತಕ್ಕೊಳಗಾದವರು.
ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸುರತ್ಕಲ್ ನಲ್ಲಿ ದೀಪಕ್ ಬಾರ್ ಅಂಡ್ ರೆಸ್ಟೋರೆಂಟ್ ಗೆ ಮದ್ಯ ಸೇವನೆಗೆ ಬಂದಿದ್ದರು. ಇವರು ಮದ್ಯ ಸೇವಿಸುತ್ತಿದ್ದಾಗ ಅಲ್ಲಿಯೇ ಬೇರೊಂದು ಟೇಬಲ್ನಲ್ಲಿದ್ದ ನಾಲ್ವರ ತಂಡದ ಜೊತೆಗೆ ಜಗಳವಾಗಿದೆ. ಎರಡು ತಂಡಗಳ ಮಧ್ಯೆ ಮಾತಿನ ಜಗಳ ಮುಂದುವರೆದ ಹಿನ್ನೆಲೆಯಲ್ಲಿ ಬಾರ್ ಸಿಬಂದಿ ಎರಡೂ ತಂಡಗಳನ್ನು ಅಲ್ಲಿಂದ ಹೊರಕ್ಕೆ ಕಳುಹಿಸಿದ್ದಾರೆ. ಬಾರ್ ನಿಂದ ಹೊರ ಬಂದ ನಂತರವೂ ಹೊಡೆದಾಟ ನಡೆದಿದ್ದು ಆರೋಪಿಗಳಲ್ಲಿ ಒಬ್ಬಾತ ಚೂರಿಯಿಂದ ಇರಿದಿದ್ದಾನೆ.

ನಿಜಾಮ್ ಎಂಬಾತನ ಹೊಟ್ಟೆ ಮತ್ತು ಕಿವಿಯ ಭಾಗಕ್ಕೆ ಚೂರಿ ಇರಿತವಾಗಿದ್ದು ಅತನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾನೆ. ಅಡ್ಡ ಬಂದ ಮುಕ್ಷಿದ್ ಮೇಲೂ ಚೂರಿ ಕೈಗೆ ತಾಗಿದ್ದು ಗಾಯವಾಗಿದೆ. ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು ಪೊಲೀಸರು ಆರೋಪಿಗಳ ಶೋಧಕ್ಕೆ ಮುಂದಾಗಿದ್ದಾರೆ. ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತ ಮತ್ತು ಸುರತ್ಕಲ್ ರೌಡಿಶೀಟರ್ ಗುರುರಾಜ್, ಅಲೆಕ್ಸ್ ಸಂತೋಷ್, ಸುಶಾಂತ್, ನಿತಿನ್ ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ, ಶೀಘ್ರದಲ್ಲೇ ಬಂಧನ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
A violent clash broke out between two groups at a bar and restaurant in Suratkal, Mangaluru, on Thursday night, resulting in a knife attack on two Muslim youths — Muksid (28) and Nizam (24) from Krishnapura, Katipalla. The altercation began inside the bar and continued outside after both groups were asked to leave.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
14-03-26 05:19 pm
HK News Staffer
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm