ಬ್ರೇಕಿಂಗ್ ನ್ಯೂಸ್
24-10-25 10:07 am Mangalore Correspondent ಕ್ರೈಂ
ಮಂಗಳೂರು, ಅ.24 : ಸುರತ್ಕಲ್ ಪೇಟೆಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು ಮುಸ್ಲಿಂ ಯುವಕರಿಬ್ಬರಿಗೆ ಚೂರಿ ಇರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಾಟಿಪಳ್ಳ ಕೃಷ್ಣಾಪುರ ನಿವಾಸಿಗಳಾದ ಮುಕ್ಷಿದ್ (28) ಮತ್ತು ನಿಜಾಮ್ (24) ಇರಿತಕ್ಕೊಳಗಾದವರು.
ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸುರತ್ಕಲ್ ನಲ್ಲಿ ದೀಪಕ್ ಬಾರ್ ಅಂಡ್ ರೆಸ್ಟೋರೆಂಟ್ ಗೆ ಮದ್ಯ ಸೇವನೆಗೆ ಬಂದಿದ್ದರು. ಇವರು ಮದ್ಯ ಸೇವಿಸುತ್ತಿದ್ದಾಗ ಅಲ್ಲಿಯೇ ಬೇರೊಂದು ಟೇಬಲ್ನಲ್ಲಿದ್ದ ನಾಲ್ವರ ತಂಡದ ಜೊತೆಗೆ ಜಗಳವಾಗಿದೆ. ಎರಡು ತಂಡಗಳ ಮಧ್ಯೆ ಮಾತಿನ ಜಗಳ ಮುಂದುವರೆದ ಹಿನ್ನೆಲೆಯಲ್ಲಿ ಬಾರ್ ಸಿಬಂದಿ ಎರಡೂ ತಂಡಗಳನ್ನು ಅಲ್ಲಿಂದ ಹೊರಕ್ಕೆ ಕಳುಹಿಸಿದ್ದಾರೆ. ಬಾರ್ ನಿಂದ ಹೊರ ಬಂದ ನಂತರವೂ ಹೊಡೆದಾಟ ನಡೆದಿದ್ದು ಆರೋಪಿಗಳಲ್ಲಿ ಒಬ್ಬಾತ ಚೂರಿಯಿಂದ ಇರಿದಿದ್ದಾನೆ.

ನಿಜಾಮ್ ಎಂಬಾತನ ಹೊಟ್ಟೆ ಮತ್ತು ಕಿವಿಯ ಭಾಗಕ್ಕೆ ಚೂರಿ ಇರಿತವಾಗಿದ್ದು ಅತನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾನೆ. ಅಡ್ಡ ಬಂದ ಮುಕ್ಷಿದ್ ಮೇಲೂ ಚೂರಿ ಕೈಗೆ ತಾಗಿದ್ದು ಗಾಯವಾಗಿದೆ. ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು ಪೊಲೀಸರು ಆರೋಪಿಗಳ ಶೋಧಕ್ಕೆ ಮುಂದಾಗಿದ್ದಾರೆ. ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತ ಮತ್ತು ಸುರತ್ಕಲ್ ರೌಡಿಶೀಟರ್ ಗುರುರಾಜ್, ಅಲೆಕ್ಸ್ ಸಂತೋಷ್, ಸುಶಾಂತ್, ನಿತಿನ್ ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ, ಶೀಘ್ರದಲ್ಲೇ ಬಂಧನ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
A violent clash broke out between two groups at a bar and restaurant in Suratkal, Mangaluru, on Thursday night, resulting in a knife attack on two Muslim youths — Muksid (28) and Nizam (24) from Krishnapura, Katipalla. The altercation began inside the bar and continued outside after both groups were asked to leave.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am