ಬ್ರೇಕಿಂಗ್ ನ್ಯೂಸ್
24-10-25 08:20 pm Mangalore Correspondent ಕ್ರೈಂ
ಮಂಗಳೂರು, ಅ.24 : ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನಾ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಪೈಕಿ ಸುಶಾಂತ್ @ ಕಡವಿ(29), ಕೆ.ವಿ ಅಲೆಕ್ಸ್(27), ನಿತಿನ್(26) ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟಿದ್ದ ಹೊನ್ನಕಟ್ಟೆಯ ಆರುಣ್ ಶೆಟ್ಟಿ(56) ಎಂಬವರನ್ನು ವಶಕ್ಕೆ ಪಡೆಯಲಾಗಿದೆ.


ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಸದ್ರಿ ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ಡಿಸಿಪಿ ರವಿಶಂಕರ್, ಉತ್ತರ ಉಪ ವಿಭಾಗ ಎಸಿಪಿ ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ. ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ಗಳಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ ಹಾಗೂ ಸಿಬ್ಬಂದಿಗಳಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ಎಎಫ್ ತಂಡದವರು ಮತ್ತು ಶ್ವಾನ ದಳದವರು ಭಾಗವಹಿಸಿರುತ್ತಾರೆ.
In connection with the recent knife attack on two youths in Suratkal, police have arrested three accused while the main suspect, Gururaj Achari, remains on the run. The incident occurred around 10:30 PM on Thursday near Deepak Bar, Kana, when a dispute between two groups escalated, leading to a violent attack.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am