ಬ್ರೇಕಿಂಗ್ ನ್ಯೂಸ್
27-10-25 05:29 pm HK News Desk ಕ್ರೈಂ
ಹಾಸನ, ಅ.27 : ಕೋಟಿ ರೂಪಾಯಿ ಚೀಟಿ ದುಡ್ಡು ಬರುತ್ತೆ, ಹಣ ಸಾಲ ಕೊಟ್ಟರೆ ದುಪ್ಪಟ್ಟು ವಾಪಸ್ ಕೊಡ್ತೇನೆ ಎಂದು ನಂಬಿಸಿ ಹಾಸನದ ಟೈಲರ್ ಮಹಿಳೆಯೊಬ್ಬರು ಮೂರು ಕೋಟಿಗೂ ಅಧಿಕ ಹಣ ವಂಚಿಸಿದ್ದು ಸಂತ್ರಸ್ತ ಮಹಿಳೆಯರು ನಡುರಸ್ತೆಯಲ್ಲೇ ಆಕೆಯ ಕೂದಲು, ರವಿಕೆ ಎಳೆದಾಡಿ ಧರ್ಮದೇಟು ನೀಡಿದ್ದಾರೆ. ಇದರ ಮೊಬೈಲ್ ವಿಡಿಯೋ ಹಾಸನದಲ್ಲಿ ವೈರಲ್ ಆಗಿದೆ.
ವಂಚಕಿ ಟೈಲರ್ ಜುಟ್ಟು ಹಿಡಿದು ವಾಹನಗಳ ಮಧ್ಯೆ ಎಳೆದಾಡಿದ್ದು ಇದರ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿದೆ. ವಂಚಕಿ ಮಹಿಳೆ ವಿರುದ್ಧ ಒಂದೆಡೆ ಪ್ರಕರಣ ದಾಖಲಾಗಿದ್ದರೆ, ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಆಕೆಯೂ ದೂರು ಕೊಟ್ಟಿದ್ದಾರೆ.
ಲೇಡಿ ಟೈಲರ್ ಹೇಮಾವತಿ ಎಂಬಾಕೆ ಹಾಸನದ ಅರಳಿಪೇಟೆ ರಸ್ತೆಯಲ್ಲಿ ತನ್ನದೇ ಆದ ಟೈಲರಿಂಗ್ ಅಂಗಡಿ ಹೊಂದಿದ್ದಳು. ಜ್ಯೋತಿ ಡ್ರೆಸ್ ಮೇಕರ್ಸ್ ಎನ್ನುವ ಅಂಗಡಿಯಿದ್ದು ಬಟ್ಟೆ ಕೊಡುತ್ತಿದ್ದ ಮಹಿಳೆಯರ ಬಳಿ ಸಲುಗೆಯಿಂದ ವ್ಯವಹರಿಸುತ್ತಿದ್ದಳು. ಅವರ ಬಳಿ ಮಾತನಾಡುತ್ತ, ಮಗಳಿಗೆ ವಿದೇಶದಲ್ಲಿ ಮಾಸ್ಟರ್ಸ್ ಓದಿಸಬೇಕು. ಈಗ ಕೋಟಿ ರೂಪಾಯಿ ಮೌಲ್ಯದ ಮನೆ ಖರೀದಿಸಿದ್ದೇನೆ ಎಂದು ಹೇಳುತ್ತಿದ್ದಳು. ಸದ್ಯಕ್ಕೆ ಒಂದಷ್ಟು ದುಡ್ಡಿನ ಅಗತ್ಯವಿದೆ, ಕೊಡಚಾದ್ರಿ ಚಿಟ್ಸ್ನಲ್ಲಿ 1 ಕೋಟಿ ರೂ.ಗೂ ಅಧಿಕ ದರಕ್ಕೆ ಚೀಟಿ ಹಾಕಿರುವೆ. ಕೆಲವೇ ತಿಂಗಳಲ್ಲಿ ಆ ಹಣ ಕೈಗೆ ಬರುತ್ತದೆ ಎಂದು ನಕಲಿ ಸ್ಲಿಪ್ಗಳನ್ನು ಮಹಿಳೆಯರಿಗೆ ತೋರಿಸಿ, ಚಿನ್ನ ಅಡವಿಟ್ಟಾದರೂ ಸರಿ ಸಾಲ ಕೊಡಿ ಎಂದು ಕೇಳುತ್ತಿದ್ದಳಂತೆ.
ಹೇಮಾವತಿ ಮಾತನ್ನು ನಂಬಿ ಕೆಲವರು ಚಿನ್ನ ಅಡವಿಟ್ಟು ಆಕೆಗೆ ಹಣ ನೀಡಿದ್ದಾರೆ. ನಿತ್ಯವೂ ಅಂಗಡಿಗೆ ಬರುವ ಮಹಿಳೆಯರನ್ನು ಮರುಳು ಮಾಡಿ, ಹಣ ಪಡೆಯುತ್ತಿದ್ದಳು. 45 ಲಕ್ಷ ರೂ.ಗಿಂತ ಹೆಚ್ಚು ಹಣ ಮೋಸ ಮಾಡಿದ್ದಾರೆ ಎಂದು ಹಾಸನ ನಗರ ಠಾಣೆ, ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವಂಚಕಿ ಹೇಮಾವತಿ ಅವರಿಗೆ ಟೈಲರ್ ಅಂಗಡಿ ಬಾಡಿಗೆ ಕೊಟ್ಟಿದ್ದ ಮಾಲೀಕರು ಮಾತನಾಡಿ, ಅಂಗಡಿ ಬಾಡಿಗೆ ಎರಡು ವರ್ಷದಿಂದ ಕೊಟ್ಟಿಲ್ಲ. ಬೇಕಂತಲೇ ಹಣ ಕೊಟ್ಟಿಲ್ಲ. ವ್ಯವಹಾರ ಫಲ ಕೊಟ್ಟಿಲ್ಲ ಎಂದರೆ ಏನೋ ಹೇಳಹುದು. ಆದರೆ, ಅಂಗಡಿ ಬ್ಯುಸಿನಸ್ ಚೆನ್ನಾಗಿಯೇ ಇತ್ತು. ಆದರೂ ಬಾಡಿಗೆ ವಾಪಸ್ ಕೊಟ್ಟಿಲ್ಲ. ಮಗಳನ್ನ ವಿದೇಶಕ್ಕೆ ಕಳುಹಿಸಿದ್ದಾರೆ. ಈಕೆ ಬೇರೆ ದುಬಾರಿ ಬಟ್ಟೆ, ಕಾರು ತಗೊಂಡಿದ್ದಾರೆ. ಕೋಟಿ ಬೆಲೆ ಬಾಳುವ ಮನೆ ಖರೀದಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
A shocking incident took place in Hassan, where a local tailor woman allegedly cheated several women of over ₹3 crore, promising to double their money through a “₹1 crore chit fund scheme.” When her fraud came to light, angry victims dragged her by her hair and thrashed her in the middle of the road, as seen in viral videos circulating on social media.
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm