ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm