ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am