ಬ್ರೇಕಿಂಗ್ ನ್ಯೂಸ್
29-10-25 02:33 pm Mangalore Correspondent ಕ್ರೈಂ
ಪುತ್ತೂರು, ಅ.29 : ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ವಂಚನೆ ನಡೆಸಿರುವ ವ್ಯಕ್ತಿಯೊಬ್ಬನ ವಿರುದ್ಧ ಮೂರ್ತೆದಾರರ ಸಹಕಾರಿ ಸಂಘ, ಪಡೀಲ್ ಪುತ್ತೂರು ಇದರ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಸವಿತಾ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ವಿವಿಧ ದಿನಗಳಲ್ಲಿ ಒಟ್ಟು 101 ಗ್ರಾಮ್ ನಕಲಿ ಚಿನ್ನವನ್ನು ಅಡವಿಟ್ಟು 6 ಲಕ್ಷಕ್ಕೂ ಅಧಿಕ ಸಾಲ ಪಡೆದು ವಂಚಿಸಿದ್ದಾಗಿ ತಿಳಿಸಿದ್ದಾರೆ.
ಆಗಸ್ಟ್ 5ರಂದು ವಿನೋದ್ ಎಂಬಾತ 32 ಗ್ರಾಮ್ ಚಿನ್ನದ ಸರವನ್ನು ತಂದಿದ್ದು ಸರಾಫ ಶ್ರೀನಿವಾಸ ಆಚಾರ್ಯ ಪರಿಶೀಲಿಸಿದ ಬಳಿಕ ಎರಡು ಲಕ್ಷ ರೂ. ಸಾಲ ನೀಡಲಾಗಿತ್ತು. ಆನಂತರ, ಮರುದಿನ ಆಗಸ್ಟ್ 6ರಂದು 17 ಗ್ರಾಮ್ ತೂಕದ ಚಿನ್ನದ ನೆಕ್ಲೆಸ್ ತಂದಿದ್ದು, ಸರಾಫರ ಪರಿಶೀಲನೆ ಬಳಿಕ 1.10 ಲಕ್ಷ ರೂ. ಸಾಲ ನೀಡಲಾಗಿತ್ತು.
ಆಗಸ್ಟ್ 26ರಂದು ಇದೇ ವ್ಯಕ್ತಿ ಒಂದು ಚೈನ್ ಮತ್ತು ಎರಡು ಬ್ರಾಸ್ಲೇಟ್ ಸೇರಿ 52 ಗ್ರಾಮ್ ತೂಕದ ಚಿನ್ನವನ್ನು ಅಡಮಾನ ಇರಿಸಲು ಬಂದಿದ್ದು ಸರಾಫ ಶ್ರೀನಿವಾಸ ಆಚಾರ್ಯ ಪರಿಶೀಲನೆ ಬಳಿಕ ಸೊಸೈಟಿಯಿಂದ 1.10 ಲಕ್ಷ ರೂ. ಸಾಲ ನೀಡಲಾಗಿತ್ತು. ಸೆ.4ರಂದು ಆರೋಪಿ ವಿನೋದ್ ಶಾಖೆಗೆ ಬಂದಿದ್ದು, ಆಗಸ್ಟ್ 5ರಂದು ಇಟ್ಟಿದ್ದ ಬಂಗಾರವನ್ನು ಬಿಡಿಸಲು ಎರಡು ಲಕ್ಷ ಅಸಲಿ ಮೊತ್ತ ಮತ್ತು ಬಡ್ಡಿ ಮೊತ್ತವನ್ನು ಪಾವತಿಸಿದ್ದಾನೆ. ಆನಂತರ, ಅದೇ ಬಂಗಾರವನ್ನು ಮರಳಿ ಅಡವಿಟ್ಟು 2.10 ಲಕ್ಷ ಸಾಲ ಪಡೆದಿದ್ದಾನೆ.
ಈ ನಡುವೆ, ಅ.17ರಂದು ಆರೋಪಿ ವಿನೋದ್ ಬೇರೆ ಸಹಕಾರಿ ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ತೆಗೆದಿರುವ ಬಗ್ಗೆ ಪತ್ರಿಕೆಗಳಲ್ಲಿ ಸುದ್ದಿ ಬಂದಿರುವುದನ್ನು ನೋಡಿ, ನಮ್ಮ ಶಾಖೆಯಲ್ಲಿ ಇಟ್ಟಿರುವ ಚಿನ್ನವನ್ನು ಪುತ್ತೂರಿನ ಬಾಲಾಜಿ ಎಂಟರ್ ಪ್ರೈಸಸ್ ನಲ್ಲಿ ಪರಿಶೀಲನೆ ನಡೆಸಿದಾಗ ವಿವಿಧ ದಿನಗಳಲ್ಲಿ ಅಡಮಾನ ಇರಿಸಿರುವ 101.580 ಗ್ರಾಮ್ ತೂಕದ ಚಿನ್ನ ನಕಲಿ ಎಂದು ತಿಳಿದುಬಂದಿರುತ್ತದೆ ಎಂದು ದೂರು ನೀಡಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been registered against a man who allegedly pledged fake gold ornaments to obtain loans from the Murthydarara Co-operative Society, Padil, Puttur. The society’s acting manager, Savitha, has lodged a formal complaint at the Puttur City Police Station.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 01:42 pm
Udupi Correspondent
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
20-11-25 06:01 pm
Mangalore Correspondent
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm
Mangalore Sukhananda Shetty murder, Arrest: ಸ...
19-11-25 07:55 pm