ಬ್ರೇಕಿಂಗ್ ನ್ಯೂಸ್
29-10-25 02:33 pm Mangalore Correspondent ಕ್ರೈಂ
ಪುತ್ತೂರು, ಅ.29 : ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ವಂಚನೆ ನಡೆಸಿರುವ ವ್ಯಕ್ತಿಯೊಬ್ಬನ ವಿರುದ್ಧ ಮೂರ್ತೆದಾರರ ಸಹಕಾರಿ ಸಂಘ, ಪಡೀಲ್ ಪುತ್ತೂರು ಇದರ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಸವಿತಾ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ವಿವಿಧ ದಿನಗಳಲ್ಲಿ ಒಟ್ಟು 101 ಗ್ರಾಮ್ ನಕಲಿ ಚಿನ್ನವನ್ನು ಅಡವಿಟ್ಟು 6 ಲಕ್ಷಕ್ಕೂ ಅಧಿಕ ಸಾಲ ಪಡೆದು ವಂಚಿಸಿದ್ದಾಗಿ ತಿಳಿಸಿದ್ದಾರೆ.
ಆಗಸ್ಟ್ 5ರಂದು ವಿನೋದ್ ಎಂಬಾತ 32 ಗ್ರಾಮ್ ಚಿನ್ನದ ಸರವನ್ನು ತಂದಿದ್ದು ಸರಾಫ ಶ್ರೀನಿವಾಸ ಆಚಾರ್ಯ ಪರಿಶೀಲಿಸಿದ ಬಳಿಕ ಎರಡು ಲಕ್ಷ ರೂ. ಸಾಲ ನೀಡಲಾಗಿತ್ತು. ಆನಂತರ, ಮರುದಿನ ಆಗಸ್ಟ್ 6ರಂದು 17 ಗ್ರಾಮ್ ತೂಕದ ಚಿನ್ನದ ನೆಕ್ಲೆಸ್ ತಂದಿದ್ದು, ಸರಾಫರ ಪರಿಶೀಲನೆ ಬಳಿಕ 1.10 ಲಕ್ಷ ರೂ. ಸಾಲ ನೀಡಲಾಗಿತ್ತು.
ಆಗಸ್ಟ್ 26ರಂದು ಇದೇ ವ್ಯಕ್ತಿ ಒಂದು ಚೈನ್ ಮತ್ತು ಎರಡು ಬ್ರಾಸ್ಲೇಟ್ ಸೇರಿ 52 ಗ್ರಾಮ್ ತೂಕದ ಚಿನ್ನವನ್ನು ಅಡಮಾನ ಇರಿಸಲು ಬಂದಿದ್ದು ಸರಾಫ ಶ್ರೀನಿವಾಸ ಆಚಾರ್ಯ ಪರಿಶೀಲನೆ ಬಳಿಕ ಸೊಸೈಟಿಯಿಂದ 1.10 ಲಕ್ಷ ರೂ. ಸಾಲ ನೀಡಲಾಗಿತ್ತು. ಸೆ.4ರಂದು ಆರೋಪಿ ವಿನೋದ್ ಶಾಖೆಗೆ ಬಂದಿದ್ದು, ಆಗಸ್ಟ್ 5ರಂದು ಇಟ್ಟಿದ್ದ ಬಂಗಾರವನ್ನು ಬಿಡಿಸಲು ಎರಡು ಲಕ್ಷ ಅಸಲಿ ಮೊತ್ತ ಮತ್ತು ಬಡ್ಡಿ ಮೊತ್ತವನ್ನು ಪಾವತಿಸಿದ್ದಾನೆ. ಆನಂತರ, ಅದೇ ಬಂಗಾರವನ್ನು ಮರಳಿ ಅಡವಿಟ್ಟು 2.10 ಲಕ್ಷ ಸಾಲ ಪಡೆದಿದ್ದಾನೆ.
ಈ ನಡುವೆ, ಅ.17ರಂದು ಆರೋಪಿ ವಿನೋದ್ ಬೇರೆ ಸಹಕಾರಿ ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ತೆಗೆದಿರುವ ಬಗ್ಗೆ ಪತ್ರಿಕೆಗಳಲ್ಲಿ ಸುದ್ದಿ ಬಂದಿರುವುದನ್ನು ನೋಡಿ, ನಮ್ಮ ಶಾಖೆಯಲ್ಲಿ ಇಟ್ಟಿರುವ ಚಿನ್ನವನ್ನು ಪುತ್ತೂರಿನ ಬಾಲಾಜಿ ಎಂಟರ್ ಪ್ರೈಸಸ್ ನಲ್ಲಿ ಪರಿಶೀಲನೆ ನಡೆಸಿದಾಗ ವಿವಿಧ ದಿನಗಳಲ್ಲಿ ಅಡಮಾನ ಇರಿಸಿರುವ 101.580 ಗ್ರಾಮ್ ತೂಕದ ಚಿನ್ನ ನಕಲಿ ಎಂದು ತಿಳಿದುಬಂದಿರುತ್ತದೆ ಎಂದು ದೂರು ನೀಡಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been registered against a man who allegedly pledged fake gold ornaments to obtain loans from the Murthydarara Co-operative Society, Padil, Puttur. The society’s acting manager, Savitha, has lodged a formal complaint at the Puttur City Police Station.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am