ಬ್ರೇಕಿಂಗ್ ನ್ಯೂಸ್
29-10-25 02:53 pm Mangalore Correspondent ಕ್ರೈಂ
ಪುತ್ತೂರು, ಅ.29 : ವಿಷನ್ ಇಂಡಿಯಾ ಲಕ್ಕಿ ಸ್ಕೀಂ ಹೆಸರಲ್ಲಿ ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ ಜನರನ್ನು ನಂಬಿಸಿ ಹಣ ಸಂಗ್ರಹಿಸುತ್ತಿರುವ ಪ್ರಕರಣ ಪತ್ತೆಹಚ್ಚಿರುವ ಪುತ್ತೂರು ನಗರ ಠಾಣೆ ಪೊಲೀಸರು ಮಂಗಳೂರಿನ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ನಗರ ಠಾಣೆಯ ಉಪ ನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸೋಮವಾರ ಸಂಜೆ 4.30ರ ಹೊತ್ತಿಗೆ ಪುತ್ತೂರು ಪೇಟೆಯಲ್ಲಿ ರೌಂಡ್ಸ್ ನಲ್ಲಿದ್ದಾಗ ಕೋರ್ಟ್ ರಸ್ತೆ ಮತ್ತಿತರ ಕಡೆ ಜನ ಗುಂಪು ಸೇರಿಕೊಂಡು ಲಕ್ಕಿ ಸ್ಕೀಮ್ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂತು. ಅವರ ಕೈಯ್ಯಲ್ಲಿ ಲಕ್ಕಿ ಸ್ಟೀಂ ಕುರಿತಾದ ಕರಪತ್ರಗಳಿರುವುದನ್ನು ನೋಡಿ ಪಿಎಸ್ಐ ವಿಚಾರಿಸಿದ್ದಾರೆ. ಒಂದು ಬಾರಿ 23,000 ರೂ. ಹೂಡಿಕೆ ಮಾಡಿದರೆ ಕಾರು, ಚಿನ್ನಾಭರಣ, ನಗದು, ಮೊಬೈಲ್, ಫ್ರೀಜ್, ಗೃಹಪಯೋಗಿ ವಸ್ತುಗಳನ್ನು ನೀಡುವ ಬಗ್ಗೆ ಜನ ಚರ್ಚಿಸುತ್ತಿದ್ದರು. ಕರಪತ್ರ ಪರಿಶೀಲಿಸಿದಾಗ ಅದರಲ್ಲಿ ಸಂಸ್ಥೆಯ ಕಚೇರಿ ವಿಳಾಸ ಇರಲಿಲ್ಲ.
ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಮಂಗಳೂರಿನ ಸಲೀಂ ಮತ್ತು ಅಜೀಜ್ ಎಂಬವರು ವಿಷನ್ ಇಂಡಿಯಾ ಲಕ್ಕಿ ಸ್ಕೀಂ 15ನೇ ತಿಂಗಳ ಡ್ರಾ, ವಿಜೇತರಿಗೆ ಬಂಕರ್ ಬಹುಮಾನ ಎಂದು ಕರಪತ್ರ ಮೂಲಕ ಪ್ರಚಾರ ಮಾಡುತ್ತಿರುವುದು ತಿಳಿಯಿತು. ಅಲ್ಲದೆ, ವಿಜೇತರಿಗೆ ಸೊತ್ತುಗಳನ್ನು ನೀಡಲು ಪುತ್ತೂರಿನ ಮಾರುಕಟ್ಟೆ ರಸ್ತೆಯಲ್ಲಿ ಬಾಡಿಗೆ ಕೋಣೆ ಪಡೆದಿರುವುದು ಗೊತ್ತಾಗಿದೆ.
ಇವರು ನಿಷೇಧಿತ ಸೀಂ ನಡೆಸುತ್ತಿರುವುದು ಶಿಕ್ಷಾರ್ಹ ಅಪರಾಧವಾಗಿದ್ದು ದುಬಾರಿ ಗಿಫ್ಟ್ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವುದನ್ನು ತಿಳಿದು ವಿಷನ್ ಇಂಡಿಯಾ ಲಕ್ಕಿ ಸ್ಕೀಮ್ ಅಕ್ರಮವಾಗಿ ನಡೆಸುತ್ತಿರುವ ಮಂಗಳೂರಿನ ಅಜೀಜ್ ಮತ್ತು ಸಲಾಂ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The Puttur City Police have registered a case against two residents of Mangaluru for allegedly running a fake “Vision India Lucky Scheme,” collecting money from the public under the pretext of offering expensive gifts.
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm