ಬ್ರೇಕಿಂಗ್ ನ್ಯೂಸ್
29-10-25 02:53 pm Mangalore Correspondent ಕ್ರೈಂ
ಪುತ್ತೂರು, ಅ.29 : ವಿಷನ್ ಇಂಡಿಯಾ ಲಕ್ಕಿ ಸ್ಕೀಂ ಹೆಸರಲ್ಲಿ ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ ಜನರನ್ನು ನಂಬಿಸಿ ಹಣ ಸಂಗ್ರಹಿಸುತ್ತಿರುವ ಪ್ರಕರಣ ಪತ್ತೆಹಚ್ಚಿರುವ ಪುತ್ತೂರು ನಗರ ಠಾಣೆ ಪೊಲೀಸರು ಮಂಗಳೂರಿನ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ನಗರ ಠಾಣೆಯ ಉಪ ನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸೋಮವಾರ ಸಂಜೆ 4.30ರ ಹೊತ್ತಿಗೆ ಪುತ್ತೂರು ಪೇಟೆಯಲ್ಲಿ ರೌಂಡ್ಸ್ ನಲ್ಲಿದ್ದಾಗ ಕೋರ್ಟ್ ರಸ್ತೆ ಮತ್ತಿತರ ಕಡೆ ಜನ ಗುಂಪು ಸೇರಿಕೊಂಡು ಲಕ್ಕಿ ಸ್ಕೀಮ್ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂತು. ಅವರ ಕೈಯ್ಯಲ್ಲಿ ಲಕ್ಕಿ ಸ್ಟೀಂ ಕುರಿತಾದ ಕರಪತ್ರಗಳಿರುವುದನ್ನು ನೋಡಿ ಪಿಎಸ್ಐ ವಿಚಾರಿಸಿದ್ದಾರೆ. ಒಂದು ಬಾರಿ 23,000 ರೂ. ಹೂಡಿಕೆ ಮಾಡಿದರೆ ಕಾರು, ಚಿನ್ನಾಭರಣ, ನಗದು, ಮೊಬೈಲ್, ಫ್ರೀಜ್, ಗೃಹಪಯೋಗಿ ವಸ್ತುಗಳನ್ನು ನೀಡುವ ಬಗ್ಗೆ ಜನ ಚರ್ಚಿಸುತ್ತಿದ್ದರು. ಕರಪತ್ರ ಪರಿಶೀಲಿಸಿದಾಗ ಅದರಲ್ಲಿ ಸಂಸ್ಥೆಯ ಕಚೇರಿ ವಿಳಾಸ ಇರಲಿಲ್ಲ.
ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಮಂಗಳೂರಿನ ಸಲೀಂ ಮತ್ತು ಅಜೀಜ್ ಎಂಬವರು ವಿಷನ್ ಇಂಡಿಯಾ ಲಕ್ಕಿ ಸ್ಕೀಂ 15ನೇ ತಿಂಗಳ ಡ್ರಾ, ವಿಜೇತರಿಗೆ ಬಂಕರ್ ಬಹುಮಾನ ಎಂದು ಕರಪತ್ರ ಮೂಲಕ ಪ್ರಚಾರ ಮಾಡುತ್ತಿರುವುದು ತಿಳಿಯಿತು. ಅಲ್ಲದೆ, ವಿಜೇತರಿಗೆ ಸೊತ್ತುಗಳನ್ನು ನೀಡಲು ಪುತ್ತೂರಿನ ಮಾರುಕಟ್ಟೆ ರಸ್ತೆಯಲ್ಲಿ ಬಾಡಿಗೆ ಕೋಣೆ ಪಡೆದಿರುವುದು ಗೊತ್ತಾಗಿದೆ.
ಇವರು ನಿಷೇಧಿತ ಸೀಂ ನಡೆಸುತ್ತಿರುವುದು ಶಿಕ್ಷಾರ್ಹ ಅಪರಾಧವಾಗಿದ್ದು ದುಬಾರಿ ಗಿಫ್ಟ್ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವುದನ್ನು ತಿಳಿದು ವಿಷನ್ ಇಂಡಿಯಾ ಲಕ್ಕಿ ಸ್ಕೀಮ್ ಅಕ್ರಮವಾಗಿ ನಡೆಸುತ್ತಿರುವ ಮಂಗಳೂರಿನ ಅಜೀಜ್ ಮತ್ತು ಸಲಾಂ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The Puttur City Police have registered a case against two residents of Mangaluru for allegedly running a fake “Vision India Lucky Scheme,” collecting money from the public under the pretext of offering expensive gifts.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm