ಬ್ರೇಕಿಂಗ್ ನ್ಯೂಸ್
29-10-25 02:53 pm Mangalore Correspondent ಕ್ರೈಂ
ಪುತ್ತೂರು, ಅ.29 : ವಿಷನ್ ಇಂಡಿಯಾ ಲಕ್ಕಿ ಸ್ಕೀಂ ಹೆಸರಲ್ಲಿ ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ ಜನರನ್ನು ನಂಬಿಸಿ ಹಣ ಸಂಗ್ರಹಿಸುತ್ತಿರುವ ಪ್ರಕರಣ ಪತ್ತೆಹಚ್ಚಿರುವ ಪುತ್ತೂರು ನಗರ ಠಾಣೆ ಪೊಲೀಸರು ಮಂಗಳೂರಿನ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ನಗರ ಠಾಣೆಯ ಉಪ ನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸೋಮವಾರ ಸಂಜೆ 4.30ರ ಹೊತ್ತಿಗೆ ಪುತ್ತೂರು ಪೇಟೆಯಲ್ಲಿ ರೌಂಡ್ಸ್ ನಲ್ಲಿದ್ದಾಗ ಕೋರ್ಟ್ ರಸ್ತೆ ಮತ್ತಿತರ ಕಡೆ ಜನ ಗುಂಪು ಸೇರಿಕೊಂಡು ಲಕ್ಕಿ ಸ್ಕೀಮ್ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂತು. ಅವರ ಕೈಯ್ಯಲ್ಲಿ ಲಕ್ಕಿ ಸ್ಟೀಂ ಕುರಿತಾದ ಕರಪತ್ರಗಳಿರುವುದನ್ನು ನೋಡಿ ಪಿಎಸ್ಐ ವಿಚಾರಿಸಿದ್ದಾರೆ. ಒಂದು ಬಾರಿ 23,000 ರೂ. ಹೂಡಿಕೆ ಮಾಡಿದರೆ ಕಾರು, ಚಿನ್ನಾಭರಣ, ನಗದು, ಮೊಬೈಲ್, ಫ್ರೀಜ್, ಗೃಹಪಯೋಗಿ ವಸ್ತುಗಳನ್ನು ನೀಡುವ ಬಗ್ಗೆ ಜನ ಚರ್ಚಿಸುತ್ತಿದ್ದರು. ಕರಪತ್ರ ಪರಿಶೀಲಿಸಿದಾಗ ಅದರಲ್ಲಿ ಸಂಸ್ಥೆಯ ಕಚೇರಿ ವಿಳಾಸ ಇರಲಿಲ್ಲ.
ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಮಂಗಳೂರಿನ ಸಲೀಂ ಮತ್ತು ಅಜೀಜ್ ಎಂಬವರು ವಿಷನ್ ಇಂಡಿಯಾ ಲಕ್ಕಿ ಸ್ಕೀಂ 15ನೇ ತಿಂಗಳ ಡ್ರಾ, ವಿಜೇತರಿಗೆ ಬಂಕರ್ ಬಹುಮಾನ ಎಂದು ಕರಪತ್ರ ಮೂಲಕ ಪ್ರಚಾರ ಮಾಡುತ್ತಿರುವುದು ತಿಳಿಯಿತು. ಅಲ್ಲದೆ, ವಿಜೇತರಿಗೆ ಸೊತ್ತುಗಳನ್ನು ನೀಡಲು ಪುತ್ತೂರಿನ ಮಾರುಕಟ್ಟೆ ರಸ್ತೆಯಲ್ಲಿ ಬಾಡಿಗೆ ಕೋಣೆ ಪಡೆದಿರುವುದು ಗೊತ್ತಾಗಿದೆ.
ಇವರು ನಿಷೇಧಿತ ಸೀಂ ನಡೆಸುತ್ತಿರುವುದು ಶಿಕ್ಷಾರ್ಹ ಅಪರಾಧವಾಗಿದ್ದು ದುಬಾರಿ ಗಿಫ್ಟ್ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವುದನ್ನು ತಿಳಿದು ವಿಷನ್ ಇಂಡಿಯಾ ಲಕ್ಕಿ ಸ್ಕೀಮ್ ಅಕ್ರಮವಾಗಿ ನಡೆಸುತ್ತಿರುವ ಮಂಗಳೂರಿನ ಅಜೀಜ್ ಮತ್ತು ಸಲಾಂ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The Puttur City Police have registered a case against two residents of Mangaluru for allegedly running a fake “Vision India Lucky Scheme,” collecting money from the public under the pretext of offering expensive gifts.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 01:42 pm
Udupi Correspondent
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
20-11-25 06:01 pm
Mangalore Correspondent
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm
Mangalore Sukhananda Shetty murder, Arrest: ಸ...
19-11-25 07:55 pm