ಬ್ರೇಕಿಂಗ್ ನ್ಯೂಸ್
29-10-25 02:53 pm Mangalore Correspondent ಕ್ರೈಂ
ಪುತ್ತೂರು, ಅ.29 : ವಿಷನ್ ಇಂಡಿಯಾ ಲಕ್ಕಿ ಸ್ಕೀಂ ಹೆಸರಲ್ಲಿ ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ ಜನರನ್ನು ನಂಬಿಸಿ ಹಣ ಸಂಗ್ರಹಿಸುತ್ತಿರುವ ಪ್ರಕರಣ ಪತ್ತೆಹಚ್ಚಿರುವ ಪುತ್ತೂರು ನಗರ ಠಾಣೆ ಪೊಲೀಸರು ಮಂಗಳೂರಿನ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ನಗರ ಠಾಣೆಯ ಉಪ ನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸೋಮವಾರ ಸಂಜೆ 4.30ರ ಹೊತ್ತಿಗೆ ಪುತ್ತೂರು ಪೇಟೆಯಲ್ಲಿ ರೌಂಡ್ಸ್ ನಲ್ಲಿದ್ದಾಗ ಕೋರ್ಟ್ ರಸ್ತೆ ಮತ್ತಿತರ ಕಡೆ ಜನ ಗುಂಪು ಸೇರಿಕೊಂಡು ಲಕ್ಕಿ ಸ್ಕೀಮ್ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂತು. ಅವರ ಕೈಯ್ಯಲ್ಲಿ ಲಕ್ಕಿ ಸ್ಟೀಂ ಕುರಿತಾದ ಕರಪತ್ರಗಳಿರುವುದನ್ನು ನೋಡಿ ಪಿಎಸ್ಐ ವಿಚಾರಿಸಿದ್ದಾರೆ. ಒಂದು ಬಾರಿ 23,000 ರೂ. ಹೂಡಿಕೆ ಮಾಡಿದರೆ ಕಾರು, ಚಿನ್ನಾಭರಣ, ನಗದು, ಮೊಬೈಲ್, ಫ್ರೀಜ್, ಗೃಹಪಯೋಗಿ ವಸ್ತುಗಳನ್ನು ನೀಡುವ ಬಗ್ಗೆ ಜನ ಚರ್ಚಿಸುತ್ತಿದ್ದರು. ಕರಪತ್ರ ಪರಿಶೀಲಿಸಿದಾಗ ಅದರಲ್ಲಿ ಸಂಸ್ಥೆಯ ಕಚೇರಿ ವಿಳಾಸ ಇರಲಿಲ್ಲ.
ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಮಂಗಳೂರಿನ ಸಲೀಂ ಮತ್ತು ಅಜೀಜ್ ಎಂಬವರು ವಿಷನ್ ಇಂಡಿಯಾ ಲಕ್ಕಿ ಸ್ಕೀಂ 15ನೇ ತಿಂಗಳ ಡ್ರಾ, ವಿಜೇತರಿಗೆ ಬಂಕರ್ ಬಹುಮಾನ ಎಂದು ಕರಪತ್ರ ಮೂಲಕ ಪ್ರಚಾರ ಮಾಡುತ್ತಿರುವುದು ತಿಳಿಯಿತು. ಅಲ್ಲದೆ, ವಿಜೇತರಿಗೆ ಸೊತ್ತುಗಳನ್ನು ನೀಡಲು ಪುತ್ತೂರಿನ ಮಾರುಕಟ್ಟೆ ರಸ್ತೆಯಲ್ಲಿ ಬಾಡಿಗೆ ಕೋಣೆ ಪಡೆದಿರುವುದು ಗೊತ್ತಾಗಿದೆ.
ಇವರು ನಿಷೇಧಿತ ಸೀಂ ನಡೆಸುತ್ತಿರುವುದು ಶಿಕ್ಷಾರ್ಹ ಅಪರಾಧವಾಗಿದ್ದು ದುಬಾರಿ ಗಿಫ್ಟ್ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವುದನ್ನು ತಿಳಿದು ವಿಷನ್ ಇಂಡಿಯಾ ಲಕ್ಕಿ ಸ್ಕೀಮ್ ಅಕ್ರಮವಾಗಿ ನಡೆಸುತ್ತಿರುವ ಮಂಗಳೂರಿನ ಅಜೀಜ್ ಮತ್ತು ಸಲಾಂ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The Puttur City Police have registered a case against two residents of Mangaluru for allegedly running a fake “Vision India Lucky Scheme,” collecting money from the public under the pretext of offering expensive gifts.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm