ಬ್ರೇಕಿಂಗ್ ನ್ಯೂಸ್
29-10-25 02:53 pm Mangalore Correspondent ಕ್ರೈಂ
ಪುತ್ತೂರು, ಅ.29 : ವಿಷನ್ ಇಂಡಿಯಾ ಲಕ್ಕಿ ಸ್ಕೀಂ ಹೆಸರಲ್ಲಿ ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ ಜನರನ್ನು ನಂಬಿಸಿ ಹಣ ಸಂಗ್ರಹಿಸುತ್ತಿರುವ ಪ್ರಕರಣ ಪತ್ತೆಹಚ್ಚಿರುವ ಪುತ್ತೂರು ನಗರ ಠಾಣೆ ಪೊಲೀಸರು ಮಂಗಳೂರಿನ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ನಗರ ಠಾಣೆಯ ಉಪ ನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸೋಮವಾರ ಸಂಜೆ 4.30ರ ಹೊತ್ತಿಗೆ ಪುತ್ತೂರು ಪೇಟೆಯಲ್ಲಿ ರೌಂಡ್ಸ್ ನಲ್ಲಿದ್ದಾಗ ಕೋರ್ಟ್ ರಸ್ತೆ ಮತ್ತಿತರ ಕಡೆ ಜನ ಗುಂಪು ಸೇರಿಕೊಂಡು ಲಕ್ಕಿ ಸ್ಕೀಮ್ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂತು. ಅವರ ಕೈಯ್ಯಲ್ಲಿ ಲಕ್ಕಿ ಸ್ಟೀಂ ಕುರಿತಾದ ಕರಪತ್ರಗಳಿರುವುದನ್ನು ನೋಡಿ ಪಿಎಸ್ಐ ವಿಚಾರಿಸಿದ್ದಾರೆ. ಒಂದು ಬಾರಿ 23,000 ರೂ. ಹೂಡಿಕೆ ಮಾಡಿದರೆ ಕಾರು, ಚಿನ್ನಾಭರಣ, ನಗದು, ಮೊಬೈಲ್, ಫ್ರೀಜ್, ಗೃಹಪಯೋಗಿ ವಸ್ತುಗಳನ್ನು ನೀಡುವ ಬಗ್ಗೆ ಜನ ಚರ್ಚಿಸುತ್ತಿದ್ದರು. ಕರಪತ್ರ ಪರಿಶೀಲಿಸಿದಾಗ ಅದರಲ್ಲಿ ಸಂಸ್ಥೆಯ ಕಚೇರಿ ವಿಳಾಸ ಇರಲಿಲ್ಲ.
ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಮಂಗಳೂರಿನ ಸಲೀಂ ಮತ್ತು ಅಜೀಜ್ ಎಂಬವರು ವಿಷನ್ ಇಂಡಿಯಾ ಲಕ್ಕಿ ಸ್ಕೀಂ 15ನೇ ತಿಂಗಳ ಡ್ರಾ, ವಿಜೇತರಿಗೆ ಬಂಕರ್ ಬಹುಮಾನ ಎಂದು ಕರಪತ್ರ ಮೂಲಕ ಪ್ರಚಾರ ಮಾಡುತ್ತಿರುವುದು ತಿಳಿಯಿತು. ಅಲ್ಲದೆ, ವಿಜೇತರಿಗೆ ಸೊತ್ತುಗಳನ್ನು ನೀಡಲು ಪುತ್ತೂರಿನ ಮಾರುಕಟ್ಟೆ ರಸ್ತೆಯಲ್ಲಿ ಬಾಡಿಗೆ ಕೋಣೆ ಪಡೆದಿರುವುದು ಗೊತ್ತಾಗಿದೆ.
ಇವರು ನಿಷೇಧಿತ ಸೀಂ ನಡೆಸುತ್ತಿರುವುದು ಶಿಕ್ಷಾರ್ಹ ಅಪರಾಧವಾಗಿದ್ದು ದುಬಾರಿ ಗಿಫ್ಟ್ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವುದನ್ನು ತಿಳಿದು ವಿಷನ್ ಇಂಡಿಯಾ ಲಕ್ಕಿ ಸ್ಕೀಮ್ ಅಕ್ರಮವಾಗಿ ನಡೆಸುತ್ತಿರುವ ಮಂಗಳೂರಿನ ಅಜೀಜ್ ಮತ್ತು ಸಲಾಂ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The Puttur City Police have registered a case against two residents of Mangaluru for allegedly running a fake “Vision India Lucky Scheme,” collecting money from the public under the pretext of offering expensive gifts.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm